1:46 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಭಾರತೀಯ ಭಾಷೆಗಳ ಬಗ್ಗೆ ಪ್ರೀತಿ, ಗೌರವ, ಅಭಿಮಾನವಿರಲಿ: ಪರಶುರಾಮ್ ಜಿ. ಮಾಳಗೆ

09/12/2022, 23:26

ಮಂಗಳೂರು(reporterkarnata.com): ಭಾರತೀಯ ಭಾಷಾ ದಿವಸದ ಅಂಗವಾಗಿ ಕೆನರಾ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಹಿಂದಿ ಮತ್ತು ಸಂಸ್ಕೃತ ಸಂಘಗಳ ಜಂಟಿ ಆಶ್ರಯದಲ್ಲಿ “ಭಾರತೀಯ ಭಾಷೆ – ಮಹತ್ವ”ದ ಕುರಿತಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿದ್ದ ಬೆಸೆಂಟ್ ಮಹಿಳಾ ಮಹಾವಿದ್ಯಾಲಯದ ಡಾ. ಪರಶುರಾಮ್ ಜಿ. ಮಾಳಗೆ ಅವರು ಮಾತನಾಡಿ, ವಿವಿಧ ಭಾಷೆಗಳನ್ನು ಆಡುವ, ವಿವಿಧ ಆಚಾರ, ವಿಚಾರ ಸಂಪ್ರದಾಯಗಳಿದ್ದರೂ ನಾವೆಲ್ಲರೂ ಒಂದೇ, ನಾವೆಲ್ಲರೂ ಭಾರತೀಯರು. ಭಾಷೆ ಯಾವುದೇ ಇರಲಿ, ಪ್ರತಿಯೊಂದು ಭಾಷೆಯಲ್ಲಿ ಪ್ರೀತಿ, ಗೌರವವನ್ನು ಇಟ್ಟುಕೊಂಡು ಮುನ್ನಡೆದಲ್ಲಿ ವ್ಯಕ್ತಿತ್ವವು ವಿಕಸನಗೊಳ್ಳುವುದು. ಭಾಷೆಯು ನಮ್ಮ ಮನಸ್ಸಿನ ಭಾವನೆಗಳನ್ನು ಪರಸ್ಪರ ವ್ಯಕ್ತಪಡಿಸುವ ಒಂದು ಒಳ್ಳೆಯ ಸಾಧನವಾಗಿರುವುದು ಎಂದು ನುಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅವರು ಅಧ್ಯಕ್ಷತೆ ವಹಿಸಿದ್ದು ಭಾಷೆ ಯಾವುದೇ ಇರಲಿ ಅದರ ಬಗ್ಗೆ ಪ್ರೀತಿ, ಅಭಿಮಾನ, ಗೌರವವನ್ನು ಇಟ್ಟುಕೊಳ್ಳುವ ಅಗತ್ಯತೆ ಇದೆ ಎಂದರು.

ಕಲ್ಪೇಶ್ ತೆಂಡಲ್ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು.
ಮನಸ್ವಿ ಮತ್ತು ಸೊನಾಲಿ ಪ್ರಾರ್ಥಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು, ಹಿಂದಿ ಸಂಘದ ಸಂಯೋಜಕಿ ಸುಜಾತಾ ಜಿ. ನಾಯಕ್ ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಹಾಗೂ ಸಂಸ್ಕೃತ ಸಂಘದ ಸಂಯೋಜಕಿ ಚೇತನಾ, ಸ್ವಾತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅನುಶ್ರೀ ವಂದಿಸಿ, ಶೃಜನ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು