10:52 AM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಮಂಗಳೂರಿನ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಆಯ್ಕೆ

10/06/2024, 15:54

ಮಂಗಳೂರು(reporterkarnataka.com): ಭಾರತೀಯ ಪಶುವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್‌ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್‌ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್‌ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್‌ಎಸ್‌ಯು ಮತ್ತು ಕೆಪಿಎಫ್‌ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ, ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶುವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಕುಕ್ಕುಟ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ರೈತರಿಗೆ ತರಬೇತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು