11:35 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಮಂಗಳೂರಿನ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಆಯ್ಕೆ

10/06/2024, 15:54

ಮಂಗಳೂರು(reporterkarnataka.com): ಭಾರತೀಯ ಪಶುವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್‌ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್‌ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್‌ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್‌ಎಸ್‌ಯು ಮತ್ತು ಕೆಪಿಎಫ್‌ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ, ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶುವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಕುಕ್ಕುಟ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ರೈತರಿಗೆ ತರಬೇತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು