9:11 AM Tuesday18 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಮಂಗಳೂರಿನ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಆಯ್ಕೆ

10/06/2024, 15:54

ಮಂಗಳೂರು(reporterkarnataka.com): ಭಾರತೀಯ ಪಶುವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್‌ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್‌ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್‌ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್‌ಎಸ್‌ಯು ಮತ್ತು ಕೆಪಿಎಫ್‌ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ, ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶುವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಕುಕ್ಕುಟ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ರೈತರಿಗೆ ತರಬೇತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು