3:50 PM Wednesday7 - January 2026
ಬ್ರೇಕಿಂಗ್ ನ್ಯೂಸ್
ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್…

ಇತ್ತೀಚಿನ ಸುದ್ದಿ

ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಮಂಗಳೂರಿನ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಆಯ್ಕೆ

10/06/2024, 15:54

ಮಂಗಳೂರು(reporterkarnataka.com): ಭಾರತೀಯ ಪಶುವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್‌ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್‌ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್‌ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್‌ಎಸ್‌ಯು ಮತ್ತು ಕೆಪಿಎಫ್‌ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ, ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶುವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಕುಕ್ಕುಟ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ರೈತರಿಗೆ ತರಬೇತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು