12:10 PM Tuesday12 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ

ಇತ್ತೀಚಿನ ಸುದ್ದಿ

ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಮಂಗಳೂರಿನ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಆಯ್ಕೆ

10/06/2024, 15:54

ಮಂಗಳೂರು(reporterkarnataka.com): ಭಾರತೀಯ ಪಶುವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್‌ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್‌ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್‌ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್‌ಎಸ್‌ಯು ಮತ್ತು ಕೆಪಿಎಫ್‌ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ, ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶುವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಕುಕ್ಕುಟ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ರೈತರಿಗೆ ತರಬೇತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು