4:31 AM Sunday28 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಮಂಗಳೂರಿನ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಆಯ್ಕೆ

10/06/2024, 15:54

ಮಂಗಳೂರು(reporterkarnataka.com): ಭಾರತೀಯ ಪಶುವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್‌ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್‌ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್‌ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್‌ಎಸ್‌ಯು ಮತ್ತು ಕೆಪಿಎಫ್‌ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ, ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶುವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಕುಕ್ಕುಟ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ರೈತರಿಗೆ ತರಬೇತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು