5:29 AM Saturday10 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಮಂಗಳೂರಿನ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಆಯ್ಕೆ

10/06/2024, 15:54

ಮಂಗಳೂರು(reporterkarnataka.com): ಭಾರತೀಯ ಪಶುವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್‌ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್‌ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್‌ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್‌ಎಸ್‌ಯು ಮತ್ತು ಕೆಪಿಎಫ್‌ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ, ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶುವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಕುಕ್ಕುಟ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ರೈತರಿಗೆ ತರಬೇತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು