1:04 AM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಮಂಗಳೂರಿನ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಆಯ್ಕೆ

10/06/2024, 15:54

ಮಂಗಳೂರು(reporterkarnataka.com): ಭಾರತೀಯ ಪಶುವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್‌ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್‌ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್‌ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್‌ಎಸ್‌ಯು ಮತ್ತು ಕೆಪಿಎಫ್‌ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ, ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶುವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಕುಕ್ಕುಟ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ರೈತರಿಗೆ ತರಬೇತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು