7:11 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಮಂಗಳೂರಿನ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಆಯ್ಕೆ

10/06/2024, 15:54

ಮಂಗಳೂರು(reporterkarnataka.com): ಭಾರತೀಯ ಪಶುವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್‌ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್‌ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್‌ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್‌ಎಸ್‌ಯು ಮತ್ತು ಕೆಪಿಎಫ್‌ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ, ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶುವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಕುಕ್ಕುಟ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ರೈತರಿಗೆ ತರಬೇತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು