5:22 AM Saturday18 - April 2026
ಬ್ರೇಕಿಂಗ್ ನ್ಯೂಸ್
ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ…

ಇತ್ತೀಚಿನ ಸುದ್ದಿ

ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಮಂಗಳೂರಿನ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಆಯ್ಕೆ

10/06/2024, 15:54

ಮಂಗಳೂರು(reporterkarnataka.com): ಭಾರತೀಯ ಪಶುವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್‌ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್‌ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್‌ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್‌ಎಸ್‌ಯು ಮತ್ತು ಕೆಪಿಎಫ್‌ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ, ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶುವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಕುಕ್ಕುಟ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ರೈತರಿಗೆ ತರಬೇತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು