7:16 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಮಂಗಳೂರಿನ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಆಯ್ಕೆ

10/06/2024, 15:54

ಮಂಗಳೂರು(reporterkarnataka.com): ಭಾರತೀಯ ಪಶುವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್‌ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್‌ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್‌ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್‌ಎಸ್‌ಯು ಮತ್ತು ಕೆಪಿಎಫ್‌ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ, ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶುವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಕುಕ್ಕುಟ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ರೈತರಿಗೆ ತರಬೇತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು