8:21 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಬಾವಾ ಪರ ಸ್ವತಃ ದೇವೇಗೌಡರೇ ಫೀಲ್ಡಿಗೆ: ಇಂದು ಮಧ್ಯಾಹ್ನ ಮಾಜಿ ಪ್ರಧಾನಿ ಸುರತ್ಕಲ್ ಗೆ; ಜೆಡಿಎಸ್ ಪರ ಪ್ರಚಾರ

01/05/2023, 10:13

ಮಂಗಳೂರು(reporterkarnataka.com): ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನತಾ ದಳ ತೀರಾ ಬಡಕಲು ಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ, ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಪ್ರಚಾರಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ಸರ್ವೋಚ್ಚ ನಾಯಕ ಎಚ್.ಡಿ. ದೇವೇಗೌಡ ಫೀಲ್ಡಿಗಿಳಿಯಲಿದ್ದಾರೆ.
ಮೊಯ್ದೀನ್ ಬಾವಾ ಅವರ ಸಹೋದರ,
ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರು ದೇವೇಗೌಡ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ಅನಾರೋಗ್ಯದ ನಡುವೆಯೂ ಉತ್ತರ ಕ್ಷೇತ್ರ ಸಂಚಾರಕ್ಕೆ ದೇವೇಗೌಡ ಅವರು ಒಪ್ಪಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಜೆಡಿಎಸ್ ಗೆ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರು ಇಲ್ಲದ ಕಾರಣ ಬಾವಾ ಪರ ಮತ ಕ್ರೋಢೀಕರಿಸಲು ದೇವೇಗೌಡ ಅವರೇ ಪ್ರಚಾರ ನಡೆಸಲಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ ಅವರು ಮೇ 1(ಇಂದು) ಮಧ್ಯಾಹ್ನ 2.00 ಗಂಟೆಗೆ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಆಗಮಿಸುವರು. 2.30 ಸುರತ್ಕಲ್ ಸೂರಜ್ ಹೋಟೆಲ್ ನಲ್ಲಿ ತಂಗುವರು. 3.30ಕ್ಕೆ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು.
4,00 ಗಂಟೆಗೆ ಬಲವಂಡಿ ದೈವಸ್ಥಾನ, 4.30ಕ್ಕೆ ಗುರುಪುರ ಕಂಬಳ ದರ್ಗಾ ಭೇಟಿ ನೀಡುವರು.
5.00 ಗುರುಪುರ ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ರಾತ್ರಿ 7.00 ನಿರ್ಗಮಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು