10:32 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಬಾವಾ ಪರ ಸ್ವತಃ ದೇವೇಗೌಡರೇ ಫೀಲ್ಡಿಗೆ: ಇಂದು ಮಧ್ಯಾಹ್ನ ಮಾಜಿ ಪ್ರಧಾನಿ ಸುರತ್ಕಲ್ ಗೆ; ಜೆಡಿಎಸ್ ಪರ ಪ್ರಚಾರ

01/05/2023, 10:13

ಮಂಗಳೂರು(reporterkarnataka.com): ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನತಾ ದಳ ತೀರಾ ಬಡಕಲು ಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ, ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಪ್ರಚಾರಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ಸರ್ವೋಚ್ಚ ನಾಯಕ ಎಚ್.ಡಿ. ದೇವೇಗೌಡ ಫೀಲ್ಡಿಗಿಳಿಯಲಿದ್ದಾರೆ.
ಮೊಯ್ದೀನ್ ಬಾವಾ ಅವರ ಸಹೋದರ,
ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರು ದೇವೇಗೌಡ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ಅನಾರೋಗ್ಯದ ನಡುವೆಯೂ ಉತ್ತರ ಕ್ಷೇತ್ರ ಸಂಚಾರಕ್ಕೆ ದೇವೇಗೌಡ ಅವರು ಒಪ್ಪಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಜೆಡಿಎಸ್ ಗೆ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರು ಇಲ್ಲದ ಕಾರಣ ಬಾವಾ ಪರ ಮತ ಕ್ರೋಢೀಕರಿಸಲು ದೇವೇಗೌಡ ಅವರೇ ಪ್ರಚಾರ ನಡೆಸಲಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ ಅವರು ಮೇ 1(ಇಂದು) ಮಧ್ಯಾಹ್ನ 2.00 ಗಂಟೆಗೆ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಆಗಮಿಸುವರು. 2.30 ಸುರತ್ಕಲ್ ಸೂರಜ್ ಹೋಟೆಲ್ ನಲ್ಲಿ ತಂಗುವರು. 3.30ಕ್ಕೆ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು.
4,00 ಗಂಟೆಗೆ ಬಲವಂಡಿ ದೈವಸ್ಥಾನ, 4.30ಕ್ಕೆ ಗುರುಪುರ ಕಂಬಳ ದರ್ಗಾ ಭೇಟಿ ನೀಡುವರು.
5.00 ಗುರುಪುರ ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ರಾತ್ರಿ 7.00 ನಿರ್ಗಮಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು