1:11 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಭವಾನಿಪುರ ಉಪ ಚುನಾವಣೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಭರ್ಜರಿ ಗೆಲುವು

03/10/2021, 16:22

ಕೊಲ್ಕತ್ತಾ(reporterkarnataka.com) : ಪಶ್ವಿಮ ಬಂಗಾಲದ ಭವಾನಿಪುರ ವಿಧಾನಸಭೆ ಕ್ಷೇತ್ರ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಪ್ರತಿಸ್ಪರ್ಧಿ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು 58,000 ಮತಗಳಿಂದ ಸೋಲಿಸಿದ್ದಾರೆ. ಇದೊಂದು ದಾಖಲೆಯ ಗೆಲುವು ಆಗಿದೆ.

ಮಮತಾ ಬ್ಯಾನರ್ಜಿ 84,709 ಮತಗಳನ್ನು ಪಡೆದರೆ, ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ 26,320 ಮತಗಳನ್ನು ಪಡೆದಿದ್ದಾರೆ. ಸಿಎಂಪಿ ಅಭ್ಯರ್ಥಿ ಶ್ರೀಜಿಬ್ ಬಿಸ್ವಾಸ್ 4,201 ಮತಗಳನ್ನು ಗಳಿಸಿದ್ದಾರೆ.

ಕಳೆದ ಮೇನಲ್ಲಿ ನಡೆದಿದ್ದ ಬಂಗಾಳ ಸಾರ್ವತ್ರಿಕ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸೋಲು ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ 6 ತಿಂಗಳ ಒಳಗೆ ಅವರು ಶಾಸಕರಾಗಿ ಆಯ್ಕೆಯಾಗುವುದು ಸಾಂವಿಧಾನಿಕವಾಗಿ ಅನಿವಾರ್ಯಾಗಿತ್ತು. ಹಾಗಾಗಿ ಭವಾನಿಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದ

ಶೋಭಂದೇಬ್ ಚಟ್ಟೋಪಾಧ್ಯಾಯ ಅವರು ಮಮತಾ ಬ್ಯಾನರ್ಜಿಗೆ ಅವರು ಶಾಸಕರಾಗುವ ಸಲುವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ

ನೀಡಿದ್ದರು. ಇಲ್ಲಿ ಉಪ ಚುನಾವಣೆ ನಡೆದು ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು