8:20 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಭೂಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್‌ ಜನರಲ್‌ ಮನೋಜ್‌ ಪಾಂಡೆ ನೇಮಕ

18/04/2022, 23:53

ಹೊಸದಿಲ್ಲಿ(reporterkarnataka.com): ಭಾರತದ ನೂತನ ಸೇನಾ ಮುಖ್ಯಸ್ಥರನ್ನಾಗಿ 
ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ನೇಮಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. 

ಪಾಂಡೆ ಅವರು ಇದುವರೆಗೆ ಸೇನಾ ಸಿಬ್ಬಂದಿಯ ಉಪಾಧ್ಯಕ್ಷ ಸ್ಥಾನವನ್ನು ನಿರ್ವಹಿಸುತ್ತಿದ್ದರು.

ಅದಕ್ಕೂ ಮೊದಲು ಪಾಂಡೆ ಅವರು ಪೂರ್ವ ಸೇನಾ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ. 31 ಡಿಸೆಂಬರ್ 2021 ರಂದು ಸೇನಾ ಮುಖ್ಯಸ್ಥರಾಗಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಜನರಲ್‌ ಮನೋಜ್‌ ಮುಕುಂದ್ ನರವಾಣೆ ಅವರು ಏಪ್ರಿಲ್ 2022ರಲ್ಲಿ ನಿವೃತ್ತರಾಗಲಿದ್ದಾರೆ.

ಇಂಜಿನಿಯರ್ ಆಗಿರುವ ಲೆಫ್ಟಿನೆಂಟ್ ಜನರಲ್ ಪಾಂಡೆ ಅವರು ಜನರಲ್ ನರವಾಣೆ ನಂತರ ಸೇನೆಯಲ್ಲಿ ಅತ್ಯಂತ ಹಿರಿಯರಾಗಿರುವ ಅಧಿಕಾರಿಯಾಗಿದ್ದು, ಆಡಳಿತವನ್ನು ವಹಿಸಿಕೊಳ್ಳಲಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಕೆಲವು ಉನ್ನತ ಅಧಿಕಾರಿಗಳು ನಿವೃತ್ತರಾಗಿದ್ದು ಪಾಂಡೆಯವರು ಈಗ ಹಿರಿತನವನ್ನು ಹೊಂದಿದ್ದಾರೆ.

ಸೇನೆಯ ತರಬೇತಿ ಕಮಾಂಡರ್ ಆಗಿದ್ದ ಲೆಫ್ಟಿನೆಂಟ್ ಜನರಲ್ ರಾಜ್ ಶುಕ್ಲಾ ಅವರು ಮಾರ್ಚ್ 31ರಂದು ನಿವೃತ್ತರಾಗಿದ್ದರು. ಕೆಲವು ಹಿರಿಯ ನಾಯಕರು ಜನವರಿ ಅಂತ್ಯದ ವೇಳೆಗೆ ರಿಟೈರ್‌ ಆಗಿದ್ದಾರೆ. ಲೆಫ್ಟಿನೆಂಟ್ ಜನರಲ್ ಸಿ.ಪಿ. ಮೊಹಂತಿ ಮತ್ತು ಲೆಫ್ಟಿನೆಂಟ್ ಜನರಲ್ ವೈ.ಕೆ. ಜೋಶಿ ಅವರು ಜನವರಿ 31ರಂದು ನಿವೃತ್ತರಾಗಿದ್ದಾರೆ.

ಪಾಂಡೆ ಅವರು ಕಾರ್ಪ್ಸ್ ಆಫ್ ಇಂಜಿನಿಯರ್ಸ್‌ನಿಂದ ಸೇನಾ ಮುಖ್ಯಸ್ಥರಾಗುವ ಮೊದಲ ಅಧಿಕಾರಿಯಾಗಲಿದ್ದಾರೆ. ಈ ಹುದ್ದೆಯನ್ನು ಇದುವರೆಗೆ ಪದಾತಿ ದಳ, ಶಸ್ತ್ರಸಜ್ಜಿತ ಮತ್ತು ಆರ್ಟಿಲರಿ ಅಧಿಕಾರಿಗಳು ವಹಿಸಿಕೊಳ್ಳುತ್ತಿದ್ದರು ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು