2:55 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಭೂತಾನ್ ನಿಂದ 17 ಸಾವಿರ ಟನ್  ಅಡಕೆ ಆಮದು: ರೈತರಲ್ಲಿ ಆತಂಕ ಬೇಡವೆಂದ ಗೃಹ ಸಚಿವರು

01/10/2022, 01:21

ಬೆಂಗಳೂರು(reporterkarnataka.com): ನೆರೆಯ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಕೆಗೆ ಮಾತ್ರ ಅನುಮತಿ ನೀಡಲಾಗಿದೆ ಎಂದರು. 

ನೆರೆಯ ಭೂತಾನ್ ದೇಶವು, ಭಾರತದ ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ. ಅಡಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದುಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕದಲ್ಲಿದ್ದು, ಭೂತಾನ್ ಅಡಕೆ ಆಮದು ವಿಚಾರವಾಗಿಯೂ, ಮಾತುಕತೆ ನಡೆಸಲಾಗುವುದು. ಬೆಳೆಗಾರರಿಗೆ ಯಾವುದೇ ಗೊಂದಲ ಆತಂಕ ಬೇಡ. ಈ ವಿಚಾರ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲು ಲೋಕಸಭಾ ಸದಸ್ಯರ ನೇತೃತ್ವದಲ್ಲಿ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದು ಸಚಿವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು