4:48 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಭೂತಾನ್ ನಿಂದ 17 ಸಾವಿರ ಟನ್  ಅಡಕೆ ಆಮದು: ರೈತರಲ್ಲಿ ಆತಂಕ ಬೇಡವೆಂದ ಗೃಹ ಸಚಿವರು

01/10/2022, 01:21

ಬೆಂಗಳೂರು(reporterkarnataka.com): ನೆರೆಯ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಕೆಗೆ ಮಾತ್ರ ಅನುಮತಿ ನೀಡಲಾಗಿದೆ ಎಂದರು. 

ನೆರೆಯ ಭೂತಾನ್ ದೇಶವು, ಭಾರತದ ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ. ಅಡಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದುಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕದಲ್ಲಿದ್ದು, ಭೂತಾನ್ ಅಡಕೆ ಆಮದು ವಿಚಾರವಾಗಿಯೂ, ಮಾತುಕತೆ ನಡೆಸಲಾಗುವುದು. ಬೆಳೆಗಾರರಿಗೆ ಯಾವುದೇ ಗೊಂದಲ ಆತಂಕ ಬೇಡ. ಈ ವಿಚಾರ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲು ಲೋಕಸಭಾ ಸದಸ್ಯರ ನೇತೃತ್ವದಲ್ಲಿ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದು ಸಚಿವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು