4:33 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

ಭೂಮಾಫಿಯಾಗೆ ಕಂದಾಯ ಸಚಿವ ಆರ್‌. ಅಶೋಕ್‌ ರಕ್ಷಣೆ:  ಆಮ್‌ ಆದ್ಮಿ ಪಾರ್ಟಿ ಆರೋಪ

30/03/2022, 12:08

ಬೆಂಗಳೂರು(reporterkarnataka.com): ಬೆಂಗಳೂರಿನ ಭೂಮಾಫಿಯಾಗೆ ಕಂದಾಯ ಸಚಿವ ಆರ್‌.ಅಶೋಕ್‌ ಬೆನ್ನೆಲುಬಾಗಿದ್ದು, ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಅವರು ರಕ್ಷಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ಆರೋಪಿಸಿದೆ.

ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಬೆಂಗಳೂರು ವಕೀಲರ ಘಟಕದ ಅಧ್ಯಕ್ಷ ಮಂಜುನಾಥ್‌ ಸ್ವಾಮಿ, “ಬೆಂಗಳೂರು ದಕ್ಷಿಣದ ಉಪವಿಭಾಗಾಧಿಕಾರಿ ಎಂ.ಜಿ.ಶಿವಣ್ಣ ಹಾಗೂ ತಹಸೀಲ್ದಾರ್‌ ಶಿವಪ್ಪ ಲಮಾಣಿಯವರು ಮುನಿರಾಜು ಹಾಗೂ ಇತರೆ ಭೂಗಳ್ಳರ ಜೊತೆಗೂಡಿ ಅಕ್ರಮ ಎಸಗಿದ್ದಾರೆ. ಕಾನೂನುಬಾಹಿರವಾಗಿ ಮನೆ ಹಾಗೂ ಮಳಿಗೆಗಳನ್ನು ಕಡೆವಿಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡತೋಗುರು ಗ್ರಾಮದ ಸರ್ವೇ ನಂಬರ್‌ 152/1ರಲ್ಲಿ ಈ ಘಟನೆ ನಡೆದಿದೆ. ಪ್ರಕರಣದ ಸಂತ್ರಸ್ತರು ಹೈಕೋರ್ಟ್‌ ಮೆಟ್ಟಿಲೇರಿದಾಗ,  ಇಬ್ಬರು ಅಧಿಕಾರಿಗಳು ಅಕ್ರಮ ಎಸಗಿರುವುದು ಸಾಬೀತಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್‌ ಆದೇಶ ನೀಡಿದೆ. ಆದರೆ ಕಂದಾಯ ಸಚಿವ ಆರ್‌.ಅಶೋಕ್‌ರವರ ಪ್ರಭಾವದಿಂದಾಗಿ ತಪ್ಪಿತಸ್ಥ ಅಧಿಕಾರಿಗಳಿಗೆ ಯಾವುದೇ ಶಿಕ್ಷೆಯಾಗಿಲ್ಲ” ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಮಾತನಾಡಿ, “ಆರ್‌.ಅಶೋಕ್‌ರವರು ಸಚಿವರಾದಾಗಿನಿಂದ ಬೆಂಗಳೂರಿನಲ್ಲಿ ಭೂಮಾಫಿಯಾ ಹಾವಳಿ ಜಾಸ್ತಿಯಾಗುತ್ತಿದೆ. ಅಕ್ರಮವಾಗಿ ಜಮೀನನ್ನು ವಶಪಡಿಸಿಕೊಳ್ಳುವುದು, ಬೆದರಿಕೆ ಒಡ್ಡಿ ಒಕ್ಕಲೆಬ್ಬಿಸುವುದು ಮುಂತಾದ ಅಕ್ರಮಗಳು ಎಗ್ಗಿಲ್ಲದೇ ಸಾಗುತ್ತಿವೆ. ಕಂದಾಯ ಇಲಾಖೆಯ ಅಧಿಕಾರಿಗಳೇ ಭೂಮಾಫಿಯಾಗೆ ಸಹಕಾರ ನೀಡುತ್ತಿದ್ದಾರೆ. ಇದರಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ಸಾಮಾನ್ಯ ಜನರು ಆತಂಕದಲ್ಲಿ ಬದುಕುವಂತಾಗಿದೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಕೀಲರಾದ ಕಾರ್ತಿಕೇಯ, ಗುರುಪ್ರಸಾದ್‌, ಸೆಂತಿಲ್‌ ಕುಮಾರ್‌, ತೇಜಸ್ವಿನಿ, ವರ್ಷಿಕಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು