10:01 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಭೂಸಂತ್ರಸ್ತರ ಹೋರಾಟ 600ನೇ ದಿನಕ್ಕೆ: ಕುಡತಿನಿ ಪಟ್ಟಣ ಸ್ವಯಂಪ್ರೇರಿತ ಬಂದ್

07/08/2024, 00:08

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೈಗಾರಿಕೆ ಉದ್ದೇಶಕ್ಕಾಗಿ ವಶಕ್ಕೆ ಪಡೆಯಲಾದ ಭೂಮಿಗೆ ಪ್ರತಿಯಾಗಿ ನ್ಯಾಯಯುತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕುಡತಿನಿ ಭೂಸಂತ್ರಸ್ತ ಹೋರಾಟಗಾರರು ನಡೆಸುತ್ತಿದ್ದ ಪ್ರತಿಭಟನೆಯು 600ನೇ ದಿನ ತಲುಪಿದೆ. ಇದರ ಅಂಗವಾಗಿ ಸಂಘಟನೆಗಳು
ಸ್ವಯಂಪ್ರೇರಿತ ಬಂದ್ ನಡೆಸಿತು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ಯು. ಬಸವರಾಜ್ ಅವರು ಮಾತನಾಡಿ, ಕೈಗಾರಿಕೆ ಸ್ಥಾಪನೆಗೆ ಮಾಡಲು ಕಂಪನಿಗಳಿಗೆ ಇಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಗಳು ಭಾರಿ ಪ್ರಮಾಣದ ಪರಿಹಾರ ಧನ ನೀಡುತ್ತವೆ. ಒಂದು ಕಂಪನಿಯವರು 40 ಸಾವಿರ ಕೋಟಿ ರೂ.ಬಂಡವಾಳ ಹೂಡಿದರೆ ಅವರಿಗೆ ಸರ್ಕಾರ ಶೇ. 30 ಸಬ್ಸಿಡಿ ನೀಡುತ್ತದೆ. ಅವರಿಗೆ 12 ಸಾವಿರ ಕೋಟಿ ರೂಪಾಯಿಗಳನ್ನು ಸರ್ಕಾರ ಕಂಪನಿಗಳಿಗೆ ನೀಡುತ್ತದೆ. ಆದರೆ ರೈತರಿಗೆ ಒಂದು ಎಕರೆಗೆ 5 ಸಾವಿರ ರೂ. ಪರಿಹಾರ ನೀಡಲು ಸರಕಾರ ಮುಂದಾಗಿಲ್ಲ. ಕಂಪನಿಗಳಿಗೆ ದೊಡ್ಡ ಪ್ರಮಾಣದ ಹಣ ನೀಡುವ ಸರಕಾರದ ಕ್ರಮವನ್ನು
ಖಂಡಿಸಿ ಈ ನಮ್ಮ ಹೋರಾಟವಿದೆ ಎಂದು ತಿಳಿಸಿದರು.
ಕುಡುತಿನಿ ಮತ್ತು ಸುತ್ತಮುತ್ತಲ ಏಳು ಗ್ರಾಮಗಳ 10 ಸಾವಿರಕ್ಕೂ ಹೆಚ್ಚು ಎಕರೆಯನ್ನು ಕೆಐಡಿಬಿ ಮೂಲಕ ಕೈಗಾರಿಕೆಗಳಿಗೆ ಸ್ವಾಧೀನ ಪಡಿಸಿಕೊಂಡು 14 ವರ್ಷ ಕಳೆದರು ಕೈಗಾರಿಕೆಗಳನ್ನು ಈವರೆಗೂ ಆರಂಭಿಸಿಲ್ಲ ಈಗಾದರೂ ಆರಂಭಿಸಬೇಕು.
ಇನ್ನೂ ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಸುಪ್ರೀಂ ಕೋರ್ಟಿನ ಆದೇಶ ಪ್ರಕಾರ ಪರಿಹಾರ ನೀಡಿಲ್ಲ. ವಶಪಡಿಸಿಕೊಂಡ ಜಮೀನನ್ನು ಅಭಿವೃದ್ಧಿಪಡಿಸಿ ಶೇ. 50ರಷ್ಟು ಜಮೀನು ನೀಡಿ ಎಂದು
ಸರ್ಕಾರಕ್ಕೆ ಪ್ರಸ್ತಾವನೆ ನೀಡಿದೆ. ಆದರೆ ಕಳೆದ 586 ದಿನಗಳಿಂದ ಹೋರಾಟ ಮಾಡುತ್ತಿದ್ದರೂ ಇದಕ್ಕೆ ಸರ್ಕಾರ ಸ್ಪಂದಿಸಿದೆ ಇರುವ ಕಾರಣ ಕುಡತಿನಿ ಬಂದ್ ಹೋರಾಟ ಮಾಡಬೇಕಾಯಿತು ಎಂದು ಹೇಳಿದರು.
ಬಂದ್ ನಿಮತ್ತ ಗ್ರಾಮದಲ್ಲಿ ಅಂಗಡಿ ಮುಗ್ಗಟುಗಳು, ಬ್ಯಾಂಕ್ ಗಳು, ಶಾಲೆ,ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಸಿಐಟಿಯು ನ ಜೆ. ಸತ್ಯಬಾಬು ಭೂಸಂತ್ರಸ್ತರಾದ ತಿಪ್ಪೇಸ್ವಾಮಿ ಜಂಗ್ಲಿ ಸಾಬ್, ಶಿವರಾಂ, ರೇಣುಕಾ ರಾಜ್ ,ದೊಡ್ಡಬಸಪ್ಪ, ಜಾನೇಕುಂಟೆ ಕೊಳಗಲ್ ಗಂಗಾಧರ ಗೌಡ
ಕನ್ನಡಪರ ಸಂಘಗಳು ಮುಖಂಡರು ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು