7:42 AM Friday26 - December 2025
ಬ್ರೇಕಿಂಗ್ ನ್ಯೂಸ್
ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಭೂಸಂತ್ರಸ್ತರ ಹೋರಾಟ 600ನೇ ದಿನಕ್ಕೆ: ಕುಡತಿನಿ ಪಟ್ಟಣ ಸ್ವಯಂಪ್ರೇರಿತ ಬಂದ್

07/08/2024, 00:08

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೈಗಾರಿಕೆ ಉದ್ದೇಶಕ್ಕಾಗಿ ವಶಕ್ಕೆ ಪಡೆಯಲಾದ ಭೂಮಿಗೆ ಪ್ರತಿಯಾಗಿ ನ್ಯಾಯಯುತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕುಡತಿನಿ ಭೂಸಂತ್ರಸ್ತ ಹೋರಾಟಗಾರರು ನಡೆಸುತ್ತಿದ್ದ ಪ್ರತಿಭಟನೆಯು 600ನೇ ದಿನ ತಲುಪಿದೆ. ಇದರ ಅಂಗವಾಗಿ ಸಂಘಟನೆಗಳು
ಸ್ವಯಂಪ್ರೇರಿತ ಬಂದ್ ನಡೆಸಿತು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ಯು. ಬಸವರಾಜ್ ಅವರು ಮಾತನಾಡಿ, ಕೈಗಾರಿಕೆ ಸ್ಥಾಪನೆಗೆ ಮಾಡಲು ಕಂಪನಿಗಳಿಗೆ ಇಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಗಳು ಭಾರಿ ಪ್ರಮಾಣದ ಪರಿಹಾರ ಧನ ನೀಡುತ್ತವೆ. ಒಂದು ಕಂಪನಿಯವರು 40 ಸಾವಿರ ಕೋಟಿ ರೂ.ಬಂಡವಾಳ ಹೂಡಿದರೆ ಅವರಿಗೆ ಸರ್ಕಾರ ಶೇ. 30 ಸಬ್ಸಿಡಿ ನೀಡುತ್ತದೆ. ಅವರಿಗೆ 12 ಸಾವಿರ ಕೋಟಿ ರೂಪಾಯಿಗಳನ್ನು ಸರ್ಕಾರ ಕಂಪನಿಗಳಿಗೆ ನೀಡುತ್ತದೆ. ಆದರೆ ರೈತರಿಗೆ ಒಂದು ಎಕರೆಗೆ 5 ಸಾವಿರ ರೂ. ಪರಿಹಾರ ನೀಡಲು ಸರಕಾರ ಮುಂದಾಗಿಲ್ಲ. ಕಂಪನಿಗಳಿಗೆ ದೊಡ್ಡ ಪ್ರಮಾಣದ ಹಣ ನೀಡುವ ಸರಕಾರದ ಕ್ರಮವನ್ನು
ಖಂಡಿಸಿ ಈ ನಮ್ಮ ಹೋರಾಟವಿದೆ ಎಂದು ತಿಳಿಸಿದರು.
ಕುಡುತಿನಿ ಮತ್ತು ಸುತ್ತಮುತ್ತಲ ಏಳು ಗ್ರಾಮಗಳ 10 ಸಾವಿರಕ್ಕೂ ಹೆಚ್ಚು ಎಕರೆಯನ್ನು ಕೆಐಡಿಬಿ ಮೂಲಕ ಕೈಗಾರಿಕೆಗಳಿಗೆ ಸ್ವಾಧೀನ ಪಡಿಸಿಕೊಂಡು 14 ವರ್ಷ ಕಳೆದರು ಕೈಗಾರಿಕೆಗಳನ್ನು ಈವರೆಗೂ ಆರಂಭಿಸಿಲ್ಲ ಈಗಾದರೂ ಆರಂಭಿಸಬೇಕು.
ಇನ್ನೂ ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಸುಪ್ರೀಂ ಕೋರ್ಟಿನ ಆದೇಶ ಪ್ರಕಾರ ಪರಿಹಾರ ನೀಡಿಲ್ಲ. ವಶಪಡಿಸಿಕೊಂಡ ಜಮೀನನ್ನು ಅಭಿವೃದ್ಧಿಪಡಿಸಿ ಶೇ. 50ರಷ್ಟು ಜಮೀನು ನೀಡಿ ಎಂದು
ಸರ್ಕಾರಕ್ಕೆ ಪ್ರಸ್ತಾವನೆ ನೀಡಿದೆ. ಆದರೆ ಕಳೆದ 586 ದಿನಗಳಿಂದ ಹೋರಾಟ ಮಾಡುತ್ತಿದ್ದರೂ ಇದಕ್ಕೆ ಸರ್ಕಾರ ಸ್ಪಂದಿಸಿದೆ ಇರುವ ಕಾರಣ ಕುಡತಿನಿ ಬಂದ್ ಹೋರಾಟ ಮಾಡಬೇಕಾಯಿತು ಎಂದು ಹೇಳಿದರು.
ಬಂದ್ ನಿಮತ್ತ ಗ್ರಾಮದಲ್ಲಿ ಅಂಗಡಿ ಮುಗ್ಗಟುಗಳು, ಬ್ಯಾಂಕ್ ಗಳು, ಶಾಲೆ,ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಸಿಐಟಿಯು ನ ಜೆ. ಸತ್ಯಬಾಬು ಭೂಸಂತ್ರಸ್ತರಾದ ತಿಪ್ಪೇಸ್ವಾಮಿ ಜಂಗ್ಲಿ ಸಾಬ್, ಶಿವರಾಂ, ರೇಣುಕಾ ರಾಜ್ ,ದೊಡ್ಡಬಸಪ್ಪ, ಜಾನೇಕುಂಟೆ ಕೊಳಗಲ್ ಗಂಗಾಧರ ಗೌಡ
ಕನ್ನಡಪರ ಸಂಘಗಳು ಮುಖಂಡರು ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು