4:30 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಭೂಸಂತ್ರಸ್ತರ ಹೋರಾಟ 600ನೇ ದಿನಕ್ಕೆ: ಕುಡತಿನಿ ಪಟ್ಟಣ ಸ್ವಯಂಪ್ರೇರಿತ ಬಂದ್

07/08/2024, 00:08

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೈಗಾರಿಕೆ ಉದ್ದೇಶಕ್ಕಾಗಿ ವಶಕ್ಕೆ ಪಡೆಯಲಾದ ಭೂಮಿಗೆ ಪ್ರತಿಯಾಗಿ ನ್ಯಾಯಯುತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕುಡತಿನಿ ಭೂಸಂತ್ರಸ್ತ ಹೋರಾಟಗಾರರು ನಡೆಸುತ್ತಿದ್ದ ಪ್ರತಿಭಟನೆಯು 600ನೇ ದಿನ ತಲುಪಿದೆ. ಇದರ ಅಂಗವಾಗಿ ಸಂಘಟನೆಗಳು
ಸ್ವಯಂಪ್ರೇರಿತ ಬಂದ್ ನಡೆಸಿತು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ಯು. ಬಸವರಾಜ್ ಅವರು ಮಾತನಾಡಿ, ಕೈಗಾರಿಕೆ ಸ್ಥಾಪನೆಗೆ ಮಾಡಲು ಕಂಪನಿಗಳಿಗೆ ಇಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಗಳು ಭಾರಿ ಪ್ರಮಾಣದ ಪರಿಹಾರ ಧನ ನೀಡುತ್ತವೆ. ಒಂದು ಕಂಪನಿಯವರು 40 ಸಾವಿರ ಕೋಟಿ ರೂ.ಬಂಡವಾಳ ಹೂಡಿದರೆ ಅವರಿಗೆ ಸರ್ಕಾರ ಶೇ. 30 ಸಬ್ಸಿಡಿ ನೀಡುತ್ತದೆ. ಅವರಿಗೆ 12 ಸಾವಿರ ಕೋಟಿ ರೂಪಾಯಿಗಳನ್ನು ಸರ್ಕಾರ ಕಂಪನಿಗಳಿಗೆ ನೀಡುತ್ತದೆ. ಆದರೆ ರೈತರಿಗೆ ಒಂದು ಎಕರೆಗೆ 5 ಸಾವಿರ ರೂ. ಪರಿಹಾರ ನೀಡಲು ಸರಕಾರ ಮುಂದಾಗಿಲ್ಲ. ಕಂಪನಿಗಳಿಗೆ ದೊಡ್ಡ ಪ್ರಮಾಣದ ಹಣ ನೀಡುವ ಸರಕಾರದ ಕ್ರಮವನ್ನು
ಖಂಡಿಸಿ ಈ ನಮ್ಮ ಹೋರಾಟವಿದೆ ಎಂದು ತಿಳಿಸಿದರು.
ಕುಡುತಿನಿ ಮತ್ತು ಸುತ್ತಮುತ್ತಲ ಏಳು ಗ್ರಾಮಗಳ 10 ಸಾವಿರಕ್ಕೂ ಹೆಚ್ಚು ಎಕರೆಯನ್ನು ಕೆಐಡಿಬಿ ಮೂಲಕ ಕೈಗಾರಿಕೆಗಳಿಗೆ ಸ್ವಾಧೀನ ಪಡಿಸಿಕೊಂಡು 14 ವರ್ಷ ಕಳೆದರು ಕೈಗಾರಿಕೆಗಳನ್ನು ಈವರೆಗೂ ಆರಂಭಿಸಿಲ್ಲ ಈಗಾದರೂ ಆರಂಭಿಸಬೇಕು.
ಇನ್ನೂ ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಸುಪ್ರೀಂ ಕೋರ್ಟಿನ ಆದೇಶ ಪ್ರಕಾರ ಪರಿಹಾರ ನೀಡಿಲ್ಲ. ವಶಪಡಿಸಿಕೊಂಡ ಜಮೀನನ್ನು ಅಭಿವೃದ್ಧಿಪಡಿಸಿ ಶೇ. 50ರಷ್ಟು ಜಮೀನು ನೀಡಿ ಎಂದು
ಸರ್ಕಾರಕ್ಕೆ ಪ್ರಸ್ತಾವನೆ ನೀಡಿದೆ. ಆದರೆ ಕಳೆದ 586 ದಿನಗಳಿಂದ ಹೋರಾಟ ಮಾಡುತ್ತಿದ್ದರೂ ಇದಕ್ಕೆ ಸರ್ಕಾರ ಸ್ಪಂದಿಸಿದೆ ಇರುವ ಕಾರಣ ಕುಡತಿನಿ ಬಂದ್ ಹೋರಾಟ ಮಾಡಬೇಕಾಯಿತು ಎಂದು ಹೇಳಿದರು.
ಬಂದ್ ನಿಮತ್ತ ಗ್ರಾಮದಲ್ಲಿ ಅಂಗಡಿ ಮುಗ್ಗಟುಗಳು, ಬ್ಯಾಂಕ್ ಗಳು, ಶಾಲೆ,ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಸಿಐಟಿಯು ನ ಜೆ. ಸತ್ಯಬಾಬು ಭೂಸಂತ್ರಸ್ತರಾದ ತಿಪ್ಪೇಸ್ವಾಮಿ ಜಂಗ್ಲಿ ಸಾಬ್, ಶಿವರಾಂ, ರೇಣುಕಾ ರಾಜ್ ,ದೊಡ್ಡಬಸಪ್ಪ, ಜಾನೇಕುಂಟೆ ಕೊಳಗಲ್ ಗಂಗಾಧರ ಗೌಡ
ಕನ್ನಡಪರ ಸಂಘಗಳು ಮುಖಂಡರು ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು