3:34 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಭೂ ಸಂತ್ರಸ್ತರಿಗೆ ಸಿಗದ ಪರಿಹಾರ: ಶೀಘ್ರದಲ್ಲೇ ಬಳ್ಳಾರಿ ಬಂದ್ ಗೆ ರಾಜ್ಯ ರೈತ ಸಂಘ ನಿರ್ಧಾರ

22/09/2024, 20:54

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmal.com

ಕೈಗಾರಿಕೆ ಸ್ಥಾಪನೆಯ ಉದ್ದೇಶಕ್ಕಾಗಿ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ ರೈತರಿಂದ ವಶಪಡಿಸಿಕೊಂಡ ಜಮೀನುಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಇಲ್ಲವೆ ಜಮೀನುಗಳನ್ನು ವಾಪಸ್‌ ನೀಡಲು ಒತ್ತಾಯಿಸಿ, ನಿರುದ್ಯೋಗ ಭತ್ಯೆಗಾಗಿ ಆಗ್ರಹಿಸಿ ಭೂ ಸಂತ್ರಸ್ತರು, ವಿವಿಧ ಸಂಘಟನೆಗಳಿಂದ ನಡೆಸುವ ಹೋರಾಟವು ಕುಡತಿನಿಯಲ್ಲಿ ಭಾನುವಾರಕ್ಕೆ 645 ದಿನಗಳನ್ನು ಪೂರೈಸಿತು.
ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಯು.ಬಸವರಾಜ್ ಮಾತನಾಡಿ, ‘ಕುಡತಿನಿ, ಸುತ್ತಲಿನ ಗ್ರಾಮಗಳ ಬಡ ರೈತರಿಂದ 2010ರಲ್ಲಿ ಅರ್ಸೇಲ್‍ರ ಮಿತ್ತಲ್, ಬ್ರಾಹ್ಮಿಣಿ ಸ್ಟೀಲ್ ಹಾಗೂ ಎನ್‍ಎಂಡಿಸಿ ಕಂಪನಿಗಳು ಕೈಗಾರಿಕೆಗಳ ಸ್ಥಾಪನೆಯ ಉದ್ದೇಶಕ್ಕಾಗಿ ಮೋಸದ ಭೂ ಬೆಲೆ, ಅತಿ ಕಡಿಮೆ ಬೆಲೆಗೆ 13 ಸಾವಿರ ಎಕರೆಯ ಭೂಮಿ ವಶಪಡಿಸಿಕೊಂಡು ಸುಮಾರು 14 ವರ್ಷಗಳಾದರೂ ಕೈಗಾರಿಕೆಗಳನ್ನು ಸ್ಥಾಪಿಸಿಲ್ಲ. ರೈತರಿಗೆ ಉದ್ಯೊಗ ಭದ್ರತೆ ಒದಗಿಸಿಲ್ಲ. ರಾಜ್ಯ ಸರ್ಕಾರವು ಮೋಸದ ಭೂ ಬೆಲೆ ರದ್ದುಪಡಿಸಿ ಕೋರ್ಟ್ ಆದೇಶದಂತೆ ಹೊಸ ಭೂ ಬೆಲೆಯನ್ನು ನಿಗದಿಪಡಿಸಿ ಪ್ರತಿ ರೈತ ಕುಟುಂಬಕ್ಕೆ ರೂ 1.60 ಲಕ್ಷಕ್ಕಿಂತ ಹೆಚ್ಚಿನ ಭೂ ಬೆಲೆಯನ್ನು ನೀಡಬೇಕು’ ಎಂದರು.

ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಎಲ್ಲ ಗ್ರಾಮಗಳ ರೈತರಿಂದ, ವಿವಿಧ ಸಂಘಟನೆಗಳ ಸಹಕಾರದಿಂದ ಶೀಘ್ರವಾಗಿ ಬಳ್ಳಾರಿ ಬಂದ್‍ ನಡೆಸಲಾಗುವುದು ಎಂದು ಹೇಳಿದರು.

‘ಇತ್ತೀಚೆಗೆ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕದ ವಿಮೋಚಾನ ದಿನಾಚರಣೆ ಅಂಗವಾಗಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು ಕಲ್ಯಾಣ ಕರ್ನಾಟಕ ಭಾಗದ ಭೂಮಿ ಕಳೆದು ಕೊಂಡ ಕುಡತಿನಿಯ ಬಡ ರೈತರು ಸುಮಾರು ಎರಡು ವರ್ಷಗಳಿಂದ ನಿರಂತರ ಧರಣಿ ನಡೆಸುತ್ತಿದ್ದರೂ ಅವರ ಬಗ್ಗೆ ಸಭೆಯಲ್ಲಿ ಮುಖ್ಯಮಂತ್ರಿ, ಇತರೆ ಮಂತ್ರಿಗಳು ಕನಿಷ್ಠ ಸೌಜನ್ಯಕ್ಕಾದರೂ ಚರ್ಚೆ ನಡೆಸಿದಿರುವುದು ಅತ್ಯಂತ ವಿಷಾದಕರ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಖಂಡರಾದ ತಿಪ್ಪೇಸ್ವಾಮಿ, ಜಂಗ್ಲಿಸಾಬ್, ಅಂಜಿನಪ್ಪ, ಯು.ತಿಮ್ಮಪ್ಪ, ಮಲ್ಲಯ್ಯ, ಶೇಖರ್, ವಿವಿಧ ಗ್ರಾಮಗಳ ರೈತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು