8:57 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಭೂ ಸಂತ್ರಸ್ತರಿಗೆ ಸಿಗದ ಪರಿಹಾರ: ಶೀಘ್ರದಲ್ಲೇ ಬಳ್ಳಾರಿ ಬಂದ್ ಗೆ ರಾಜ್ಯ ರೈತ ಸಂಘ ನಿರ್ಧಾರ

22/09/2024, 20:54

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmal.com

ಕೈಗಾರಿಕೆ ಸ್ಥಾಪನೆಯ ಉದ್ದೇಶಕ್ಕಾಗಿ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ ರೈತರಿಂದ ವಶಪಡಿಸಿಕೊಂಡ ಜಮೀನುಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಇಲ್ಲವೆ ಜಮೀನುಗಳನ್ನು ವಾಪಸ್‌ ನೀಡಲು ಒತ್ತಾಯಿಸಿ, ನಿರುದ್ಯೋಗ ಭತ್ಯೆಗಾಗಿ ಆಗ್ರಹಿಸಿ ಭೂ ಸಂತ್ರಸ್ತರು, ವಿವಿಧ ಸಂಘಟನೆಗಳಿಂದ ನಡೆಸುವ ಹೋರಾಟವು ಕುಡತಿನಿಯಲ್ಲಿ ಭಾನುವಾರಕ್ಕೆ 645 ದಿನಗಳನ್ನು ಪೂರೈಸಿತು.
ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಯು.ಬಸವರಾಜ್ ಮಾತನಾಡಿ, ‘ಕುಡತಿನಿ, ಸುತ್ತಲಿನ ಗ್ರಾಮಗಳ ಬಡ ರೈತರಿಂದ 2010ರಲ್ಲಿ ಅರ್ಸೇಲ್‍ರ ಮಿತ್ತಲ್, ಬ್ರಾಹ್ಮಿಣಿ ಸ್ಟೀಲ್ ಹಾಗೂ ಎನ್‍ಎಂಡಿಸಿ ಕಂಪನಿಗಳು ಕೈಗಾರಿಕೆಗಳ ಸ್ಥಾಪನೆಯ ಉದ್ದೇಶಕ್ಕಾಗಿ ಮೋಸದ ಭೂ ಬೆಲೆ, ಅತಿ ಕಡಿಮೆ ಬೆಲೆಗೆ 13 ಸಾವಿರ ಎಕರೆಯ ಭೂಮಿ ವಶಪಡಿಸಿಕೊಂಡು ಸುಮಾರು 14 ವರ್ಷಗಳಾದರೂ ಕೈಗಾರಿಕೆಗಳನ್ನು ಸ್ಥಾಪಿಸಿಲ್ಲ. ರೈತರಿಗೆ ಉದ್ಯೊಗ ಭದ್ರತೆ ಒದಗಿಸಿಲ್ಲ. ರಾಜ್ಯ ಸರ್ಕಾರವು ಮೋಸದ ಭೂ ಬೆಲೆ ರದ್ದುಪಡಿಸಿ ಕೋರ್ಟ್ ಆದೇಶದಂತೆ ಹೊಸ ಭೂ ಬೆಲೆಯನ್ನು ನಿಗದಿಪಡಿಸಿ ಪ್ರತಿ ರೈತ ಕುಟುಂಬಕ್ಕೆ ರೂ 1.60 ಲಕ್ಷಕ್ಕಿಂತ ಹೆಚ್ಚಿನ ಭೂ ಬೆಲೆಯನ್ನು ನೀಡಬೇಕು’ ಎಂದರು.

ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಎಲ್ಲ ಗ್ರಾಮಗಳ ರೈತರಿಂದ, ವಿವಿಧ ಸಂಘಟನೆಗಳ ಸಹಕಾರದಿಂದ ಶೀಘ್ರವಾಗಿ ಬಳ್ಳಾರಿ ಬಂದ್‍ ನಡೆಸಲಾಗುವುದು ಎಂದು ಹೇಳಿದರು.

‘ಇತ್ತೀಚೆಗೆ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕದ ವಿಮೋಚಾನ ದಿನಾಚರಣೆ ಅಂಗವಾಗಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು ಕಲ್ಯಾಣ ಕರ್ನಾಟಕ ಭಾಗದ ಭೂಮಿ ಕಳೆದು ಕೊಂಡ ಕುಡತಿನಿಯ ಬಡ ರೈತರು ಸುಮಾರು ಎರಡು ವರ್ಷಗಳಿಂದ ನಿರಂತರ ಧರಣಿ ನಡೆಸುತ್ತಿದ್ದರೂ ಅವರ ಬಗ್ಗೆ ಸಭೆಯಲ್ಲಿ ಮುಖ್ಯಮಂತ್ರಿ, ಇತರೆ ಮಂತ್ರಿಗಳು ಕನಿಷ್ಠ ಸೌಜನ್ಯಕ್ಕಾದರೂ ಚರ್ಚೆ ನಡೆಸಿದಿರುವುದು ಅತ್ಯಂತ ವಿಷಾದಕರ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಖಂಡರಾದ ತಿಪ್ಪೇಸ್ವಾಮಿ, ಜಂಗ್ಲಿಸಾಬ್, ಅಂಜಿನಪ್ಪ, ಯು.ತಿಮ್ಮಪ್ಪ, ಮಲ್ಲಯ್ಯ, ಶೇಖರ್, ವಿವಿಧ ಗ್ರಾಮಗಳ ರೈತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು