1:20 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಬಿಡದಿ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಭೇಟಿ

28/05/2025, 00:01

ಬೆಂಗಳೂರು(reporterkarnataka.com): ಬಿಡದಿಯಲ್ಲಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಸ್ವಚ್ಛತೆ ಜತೆಗೆ ನಿರ್ವಹಣೆಗೂ ಆದ್ಯತೆ ನೀಡುವ ದೃಷ್ಟಿಯಿಂದ ಬಿಬಿಎಂಪಿ ಹಾಗೂ ಇಂಧನ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆಯಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.


ಮಂಗಳವಾರ ಬಿಡದಿಯ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು, “ಇಲ್ಲಿ ದುರ್ವಾಸನೆ ಬಂದು ಸುತ್ತಲಿನ ನಿವಾಸಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಪ್ರತಿ ನಿತ್ಯ ವಾಸನೆ ನಿಯಂತ್ರಣ ರಾಸಾಯನಿಕ ಬಳಸಬೇಕು”, ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
“ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕಕ್ಕೆ ನಗರದ ವಿವಿಧ ಭಾಗಗಳಿಂದ ಲಾರಿಗಳಲ್ಲಿ ತ್ಯಾಜ್ಯ ತರಲಾಗುತ್ತದೆ. ಇಲ್ಲಿ ತ್ಯಾಜ್ಯ ಖಾಲಿ ಮಾಡಿ ವಾಪಸಾಗುವಾಗ ದುರ್ವಾಸನೆ ಬರುತ್ತದೆ ಎಂಬ ದೂರುಗಳಿವೆ. ಹೀಗಾಗಿ ತ್ಯಾಜ್ಯ ಖಾಲಿ ಮಾಡಿದ ಲಾರಿಗಳು ವಾಪಸ್ ಹೋಗುವ ಮುನ್ನ ಅವುಗಳನ್ನು ಸ್ವಚ್ಛಗೊಳಿಸಲು ಆವರಣದಲ್ಲಿಯೇ ಸ್ವಚ್ಛತಾ ವ್ಯವಸ್ಥೆ ಕಲ್ಪಿಸಬೇಕು”, ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
“ವಿದ್ಯುತ್ ಉತ್ಪಾದನಾ ಘಟಕಕ್ಕೆ ಬರುವ ತ್ಯಾಜ್ಯದಲ್ಲಿ ಕೆಲವೊಂದು ಸಮಸ್ಯೆಗಳಿವೆ. ಅದೇ ರೀತಿ ಖಾಸಗಿಯವರು ಘಟಕ ನಿರ್ವಹಿಸುವ ವಿಚಾರದಲ್ಲೂ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಜತೆಗೆ ಸ್ವಚ್ಛತೆಯ ಬಗ್ಗೆಯೂ ಗಮನ ಹರಿಸಬೇಕಾಗಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಬಿಬಿಎಂಪಿ ಹಾಗೂ ಇಂಧನ ಇಲಾಖೆಯ ಉನ್ನತ ಅಧಿಕಾರಿಗಳು, ಘಟಕ ನಿರ್ವಹಣೆ ಮಾಡುತ್ತಿರುವ ಖಾಸಗಿ ಕಂಪನಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು”, ಎಂದು ಹೇಳಿದರು.
*ಶೀಘ್ರ ಪರಿಹಾರ ವಿತರಣೆ*
“ವಿದ್ಯುತ್ ಉತ್ಪಾದನಾ ಘಟಕದಲ್ಲಿ ಇತ್ತೀಚೆಗೆ ದುರಂತ ಸಂಭವಿಸಿ 5 ಮಂದಿ ಮೃತಪಟ್ಟಿದ್ದು, ಅವರ ಕುಟುಂಬದವರಿಗೆ ಕೆಪಿಸಿಎಲ್ ವತಿಯಿಂದ ತಲಾ 5 ಲಕ್ಷ ರೂ. ಪರಿಹಾವನ್ನು ಶೀಘ್ರವೇ ವಿತರಿಸಲಾಗುವುದು. ಜತೆಗೆ ಘಟಕ ನಿರ್ವಹಿಸುವ ಕಂಪನಿಯಿಂದಲೂ ಸೂಕ್ತ ಪರಿಹಾರ ಒದಗಿಸಲಾಗುವುದು”, ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು