7:24 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಬಿಡದಿ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಭೇಟಿ

28/05/2025, 00:01

ಬೆಂಗಳೂರು(reporterkarnataka.com): ಬಿಡದಿಯಲ್ಲಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಸ್ವಚ್ಛತೆ ಜತೆಗೆ ನಿರ್ವಹಣೆಗೂ ಆದ್ಯತೆ ನೀಡುವ ದೃಷ್ಟಿಯಿಂದ ಬಿಬಿಎಂಪಿ ಹಾಗೂ ಇಂಧನ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆಯಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.


ಮಂಗಳವಾರ ಬಿಡದಿಯ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು, “ಇಲ್ಲಿ ದುರ್ವಾಸನೆ ಬಂದು ಸುತ್ತಲಿನ ನಿವಾಸಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಪ್ರತಿ ನಿತ್ಯ ವಾಸನೆ ನಿಯಂತ್ರಣ ರಾಸಾಯನಿಕ ಬಳಸಬೇಕು”, ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
“ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕಕ್ಕೆ ನಗರದ ವಿವಿಧ ಭಾಗಗಳಿಂದ ಲಾರಿಗಳಲ್ಲಿ ತ್ಯಾಜ್ಯ ತರಲಾಗುತ್ತದೆ. ಇಲ್ಲಿ ತ್ಯಾಜ್ಯ ಖಾಲಿ ಮಾಡಿ ವಾಪಸಾಗುವಾಗ ದುರ್ವಾಸನೆ ಬರುತ್ತದೆ ಎಂಬ ದೂರುಗಳಿವೆ. ಹೀಗಾಗಿ ತ್ಯಾಜ್ಯ ಖಾಲಿ ಮಾಡಿದ ಲಾರಿಗಳು ವಾಪಸ್ ಹೋಗುವ ಮುನ್ನ ಅವುಗಳನ್ನು ಸ್ವಚ್ಛಗೊಳಿಸಲು ಆವರಣದಲ್ಲಿಯೇ ಸ್ವಚ್ಛತಾ ವ್ಯವಸ್ಥೆ ಕಲ್ಪಿಸಬೇಕು”, ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
“ವಿದ್ಯುತ್ ಉತ್ಪಾದನಾ ಘಟಕಕ್ಕೆ ಬರುವ ತ್ಯಾಜ್ಯದಲ್ಲಿ ಕೆಲವೊಂದು ಸಮಸ್ಯೆಗಳಿವೆ. ಅದೇ ರೀತಿ ಖಾಸಗಿಯವರು ಘಟಕ ನಿರ್ವಹಿಸುವ ವಿಚಾರದಲ್ಲೂ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಜತೆಗೆ ಸ್ವಚ್ಛತೆಯ ಬಗ್ಗೆಯೂ ಗಮನ ಹರಿಸಬೇಕಾಗಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಬಿಬಿಎಂಪಿ ಹಾಗೂ ಇಂಧನ ಇಲಾಖೆಯ ಉನ್ನತ ಅಧಿಕಾರಿಗಳು, ಘಟಕ ನಿರ್ವಹಣೆ ಮಾಡುತ್ತಿರುವ ಖಾಸಗಿ ಕಂಪನಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು”, ಎಂದು ಹೇಳಿದರು.
*ಶೀಘ್ರ ಪರಿಹಾರ ವಿತರಣೆ*
“ವಿದ್ಯುತ್ ಉತ್ಪಾದನಾ ಘಟಕದಲ್ಲಿ ಇತ್ತೀಚೆಗೆ ದುರಂತ ಸಂಭವಿಸಿ 5 ಮಂದಿ ಮೃತಪಟ್ಟಿದ್ದು, ಅವರ ಕುಟುಂಬದವರಿಗೆ ಕೆಪಿಸಿಎಲ್ ವತಿಯಿಂದ ತಲಾ 5 ಲಕ್ಷ ರೂ. ಪರಿಹಾವನ್ನು ಶೀಘ್ರವೇ ವಿತರಿಸಲಾಗುವುದು. ಜತೆಗೆ ಘಟಕ ನಿರ್ವಹಿಸುವ ಕಂಪನಿಯಿಂದಲೂ ಸೂಕ್ತ ಪರಿಹಾರ ಒದಗಿಸಲಾಗುವುದು”, ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು