4:55 AM Sunday15 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

Big Breaking | ಯಡಿಯೂರಪ್ಪ ರಾಜೀನಾಮೆ ಘೋಷಣೆ; ಸಾಧನಾ ಸಮಾವೇಶದಲ್ಲಿ ಭಾವುಕರಾದ ಬಿಎಸ್‌ವೈ

26/07/2021, 12:21

ಬೆಂಗಳೂರು(reoporterkarnataka.com)
2ನೇ ವರ್ಷದ ಬಿಜೆಪಿ ಸಾಧನಾ ಸಮಾವೇಶದಲ್ಲೇ ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಕಾರ್ಯಕ್ರಮದ ಮುಕ್ತಾಯದ ಬಳಿಕ, ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಪಕ್ಷದ ಕಾರ್ಯಕ್ರಮದಲ್ಲೇ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ.

ಶಿಕಾರಿಪುರದಲ್ಲಿ ಸಂಘದ ಕಾರ್ಯಕರ್ತನಾಗಿ ಜೀವನ ಆರಂಭಿಸಿದೆ. ಆರ್ ಎಸ್ ಎಸ್ ಪ್ರಚಾರಕನಾಗಿ ಕಾರ್ಯ ಆರಂಭವಾಯಿತು. ಕ್ರಮೇಣ ಶಿಕಾರಿಪುರ ಪುರಸಭೆಗೆ ನಿಂತು ಗೆದ್ದಿದ್ದೇನೆ. ಮನೆಯಿಂದ ಶಿಕಾರಿಪುರ ಕಚೇರಿಗೆ ತೆರಳಬೇಕಾದಂತ ಸಂದರ್ಭದಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ನಾನು ಸತ್ತೇ ಹೋಗಿದ್ದೆ ಎನ್ನಲಾಗುತ್ತು. ಬದುಕಿದೆ. ಅಂದೇ ಜನಸೇವೆ ಮಾಡುವಂತ ನಿರ್ಧಾರ ಮಾಡಿದೆ. ನಮ್ಮ ಕುಟುಂಬಕ್ಕೂ ಇದನ್ನು ಅವತ್ತೇ ಹೇಳಿದೆ.
ಅದರಂತೆ ರೈತರಪರ, ದಲಿತರ ಪರ ಹೋರಾಟ ಮಾಡಿದೆ ಎಂದರು.

ಹೀಗೆ ಕರ್ನಾಟಕ ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವಂತ ಕೆಲಸ ಮಾಡಿದ ಪರಿಣಾಮ, ಇವತ್ತು ಸಿಎಂ ಸ್ಥಾನದಲ್ಲಿ ಇದ್ದೇನೆ ಎಂದು ಹೇಳಲು ಇಚ್ಛೆ ಪಡುತ್ತೇನೆ. ಅಂದು ಅಟಲ್ ಬಿಹಾರಿ ವಾಜಪೇಯಿ ಅವರು ನೀವು ದೆಹಲಿಗೆ ಬನ್ನಿ ಎಂದರು. ಆದ್ರೇ ನಾನು ಯಾವುದೇ ಕಾರಣಕ್ಕೂ ದೆಹಲಿಗೆ ಬರೋದಿಲ್ಲ. ಕರ್ನಾಟಕದಲ್ಲಿ ಪಕ್ಷ ಕಟ್ಟಬೇಕು ಎಂಬುದಾಗಿ ಇಲ್ಲಿಯೇ ಉಳಿದೆ. ಆ ಮೂಲಕ ಕೆಲಸ ಮಾಡಿದೆ. ಆ ಸಂದರ್ಭದಲ್ಲಿ ಪಕ್ಷದ ಹಿರಿಯರು ಬಂದಾಗ 200, 300 ಜನರು ಸೇರ್ತಾ ಇರಲಿಲ್ಲ. ಈಗ ಭಗವಂತನ ದಯೆಯಿಂದ ಒಬ್ಬರು ಇಬ್ಬರಿದ್ದವರು ಇಷ್ಟು ಪ್ರಮಾಣದಲ್ಲಿ ಬೆಳೆದಿದೆ ಎಂಬುದಾಗಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಣ್ಣೀರಿಟ್ಟರು.

ಇವತ್ತು ಇಲ್ಲಿ ನಾವು ಇದ್ದೇವೆ ಅಂದ್ರೇ. ಈ ಪರಿಸ್ಥಿತಿಗೆ ಲಕ್ಷಾಂತರ ಜನ ಕಾರ್ಯಕರ್ತರೇ ಕಾರಣ. ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಿಲ್ಲ. ಆದ್ರೇ ಪ್ರಧಾನಿ ನರೇಂದ್ರ ಮೋದಿಯವರು, ಗೃಹ ಸಚಿವ ಅಮಿತ್ ಶಾ ಅವರು ನನಗೆ ಅವಕಾಶ ಮಾಡಿಕೊಟ್ಟರು. ಎರಡು ವರ್ಷ ಈ ರಾಜ್ಯದ ಜನರ ಸೇವೆ ಮಾಡಿದ್ದೇನೆ ಎಂಬುದಾಗಿ ಭಾವುಕರಾಗಿ ನುಡಿದರು.

ಇಂದು ಊಟವಾದ ಬಳಿಕ, ರಾಜಭವನಕ್ಕೆ ತೆರಳಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಯಡಿಯೂರಪ್ಪ ಘೋಷಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು