10:26 PM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

Big Breaking | ಯಡಿಯೂರಪ್ಪ ರಾಜೀನಾಮೆ ಘೋಷಣೆ; ಸಾಧನಾ ಸಮಾವೇಶದಲ್ಲಿ ಭಾವುಕರಾದ ಬಿಎಸ್‌ವೈ

26/07/2021, 12:21

ಬೆಂಗಳೂರು(reoporterkarnataka.com)
2ನೇ ವರ್ಷದ ಬಿಜೆಪಿ ಸಾಧನಾ ಸಮಾವೇಶದಲ್ಲೇ ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಕಾರ್ಯಕ್ರಮದ ಮುಕ್ತಾಯದ ಬಳಿಕ, ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಪಕ್ಷದ ಕಾರ್ಯಕ್ರಮದಲ್ಲೇ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ.

ಶಿಕಾರಿಪುರದಲ್ಲಿ ಸಂಘದ ಕಾರ್ಯಕರ್ತನಾಗಿ ಜೀವನ ಆರಂಭಿಸಿದೆ. ಆರ್ ಎಸ್ ಎಸ್ ಪ್ರಚಾರಕನಾಗಿ ಕಾರ್ಯ ಆರಂಭವಾಯಿತು. ಕ್ರಮೇಣ ಶಿಕಾರಿಪುರ ಪುರಸಭೆಗೆ ನಿಂತು ಗೆದ್ದಿದ್ದೇನೆ. ಮನೆಯಿಂದ ಶಿಕಾರಿಪುರ ಕಚೇರಿಗೆ ತೆರಳಬೇಕಾದಂತ ಸಂದರ್ಭದಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ನಾನು ಸತ್ತೇ ಹೋಗಿದ್ದೆ ಎನ್ನಲಾಗುತ್ತು. ಬದುಕಿದೆ. ಅಂದೇ ಜನಸೇವೆ ಮಾಡುವಂತ ನಿರ್ಧಾರ ಮಾಡಿದೆ. ನಮ್ಮ ಕುಟುಂಬಕ್ಕೂ ಇದನ್ನು ಅವತ್ತೇ ಹೇಳಿದೆ.
ಅದರಂತೆ ರೈತರಪರ, ದಲಿತರ ಪರ ಹೋರಾಟ ಮಾಡಿದೆ ಎಂದರು.

ಹೀಗೆ ಕರ್ನಾಟಕ ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವಂತ ಕೆಲಸ ಮಾಡಿದ ಪರಿಣಾಮ, ಇವತ್ತು ಸಿಎಂ ಸ್ಥಾನದಲ್ಲಿ ಇದ್ದೇನೆ ಎಂದು ಹೇಳಲು ಇಚ್ಛೆ ಪಡುತ್ತೇನೆ. ಅಂದು ಅಟಲ್ ಬಿಹಾರಿ ವಾಜಪೇಯಿ ಅವರು ನೀವು ದೆಹಲಿಗೆ ಬನ್ನಿ ಎಂದರು. ಆದ್ರೇ ನಾನು ಯಾವುದೇ ಕಾರಣಕ್ಕೂ ದೆಹಲಿಗೆ ಬರೋದಿಲ್ಲ. ಕರ್ನಾಟಕದಲ್ಲಿ ಪಕ್ಷ ಕಟ್ಟಬೇಕು ಎಂಬುದಾಗಿ ಇಲ್ಲಿಯೇ ಉಳಿದೆ. ಆ ಮೂಲಕ ಕೆಲಸ ಮಾಡಿದೆ. ಆ ಸಂದರ್ಭದಲ್ಲಿ ಪಕ್ಷದ ಹಿರಿಯರು ಬಂದಾಗ 200, 300 ಜನರು ಸೇರ್ತಾ ಇರಲಿಲ್ಲ. ಈಗ ಭಗವಂತನ ದಯೆಯಿಂದ ಒಬ್ಬರು ಇಬ್ಬರಿದ್ದವರು ಇಷ್ಟು ಪ್ರಮಾಣದಲ್ಲಿ ಬೆಳೆದಿದೆ ಎಂಬುದಾಗಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಣ್ಣೀರಿಟ್ಟರು.

ಇವತ್ತು ಇಲ್ಲಿ ನಾವು ಇದ್ದೇವೆ ಅಂದ್ರೇ. ಈ ಪರಿಸ್ಥಿತಿಗೆ ಲಕ್ಷಾಂತರ ಜನ ಕಾರ್ಯಕರ್ತರೇ ಕಾರಣ. ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಿಲ್ಲ. ಆದ್ರೇ ಪ್ರಧಾನಿ ನರೇಂದ್ರ ಮೋದಿಯವರು, ಗೃಹ ಸಚಿವ ಅಮಿತ್ ಶಾ ಅವರು ನನಗೆ ಅವಕಾಶ ಮಾಡಿಕೊಟ್ಟರು. ಎರಡು ವರ್ಷ ಈ ರಾಜ್ಯದ ಜನರ ಸೇವೆ ಮಾಡಿದ್ದೇನೆ ಎಂಬುದಾಗಿ ಭಾವುಕರಾಗಿ ನುಡಿದರು.

ಇಂದು ಊಟವಾದ ಬಳಿಕ, ರಾಜಭವನಕ್ಕೆ ತೆರಳಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಯಡಿಯೂರಪ್ಪ ಘೋಷಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು