10:04 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಬಿಗ್‌ ಬಾಸ್ -8 ಸ್ಪರ್ಧೆ: ವಿನ್ನರ್  ಮಂಜು ಪಾವಗಡ; 17 ವಾರಗಳ ರಿಯಾಲಿಟಿ ಶೋ ಜರ್ನಿಗೆ ತೆರೆ 

09/08/2021, 08:00

ಬೆಂಗಳೂರು(reporterkarnataka.com) : ಬಿಗ್ ಬಾಸ್ ಸೀಸನ್ ಎಂಟರ ಫಿನಾಲೆಯಲ್ಲಿ ಮಂಜು ಪಾವಗಡ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಗ್ ಬಾಸ್ 120 ದಿನಗಳ ಯಾನ ಮುಕ್ತಾಯಗೊಂಡಿದೆ.

ಹೆಸರಾಂತ ನಟ, ಬಿಗ್ ಬಾಸ್  ನಿರೂಪಕ ಸುದೀಪ್ ಅವರು ಬಿಗ್ ಬಾಸ್​ ಮನೆಯೊಳಗೆ ಹೋಗಿ ಇಬ್ಬರು ಫೈನಲಿಸ್ಟ್​ಗಳಾದ ಮಂಜು ಪಾವಗಡ ಹಾಗೂ ಅರವಿಂದ್ ಕೆ.ಪಿ.  ಅವರನ್ನು ಕೈ ಹಿಡಿದು ವೇದಿಕೆಗೆ ಕರೆ ತಂದರು.

ಫೈನಲಿಸ್ಟ್​ಗಳು ವೇದಿಕೆ ಕಾಲಿಡುತ್ತಿದ್ದಂತೆಯೇ ನೆರೆದಿದವರ ಚಪ್ಪಾಳೆ ಜೋರಾಯಿತು. ಫಲಿತಾಂಶ ಪ್ರಕಟಿಸುವ ಮುನ್ನ ಸುದೀಪ್ ಅವರು ಇತರೆ ಸ್ಪರ್ಧಿಗಳನ್ನು ಯಾರು ಜಯಗಳಿಸಬೇಕೆಂಬುದು ನಿಮ್ಮ ಇಷ್ಟ ಎನ್ನುತ್ತಾರೆ. ಆಗ ಶಮಂತ್ ಹಾಗೂ ದಿವ್ಯಾ ಉರುಡುಗ ಅವರನ್ನು ಹೊರತು ಪಡಿಸಿ ಉಳಿದವರೆಲ್ಲ ಮಂಜು ಅವರೇ ಗೆಲ್ಲಬೇಕು ಎಂದು. ಅದರಲ್ಲೂ ಮಂಜು ಅವರ ಬಾರಿ ನಿಂದಕರಾದ ಚಕ್ರವರ್ತಿ ಹಾಗೂ ಪ್ರಶಾಂತ್​ ಅವರು ಕೂಡ ಮಂಜು ಗೆಲ್ಲಬೇಕು ಎಂದು ಹೇಳುತ್ತಾರೆ. ಕೊನೆಗೂ 17 ವಾರಗಳ ಕಾಲ ನಡೆದ ಜರ್ನಿಗೆ ನಿನ್ನೆ ಅದ್ದೂರಿಗೆ ತೆರೆ ಎಳೆಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು