9:10 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಬಿಗ್‌ ಬಾಸ್ -8 ಸ್ಪರ್ಧೆ: ವಿನ್ನರ್  ಮಂಜು ಪಾವಗಡ; 17 ವಾರಗಳ ರಿಯಾಲಿಟಿ ಶೋ ಜರ್ನಿಗೆ ತೆರೆ 

09/08/2021, 08:00

ಬೆಂಗಳೂರು(reporterkarnataka.com) : ಬಿಗ್ ಬಾಸ್ ಸೀಸನ್ ಎಂಟರ ಫಿನಾಲೆಯಲ್ಲಿ ಮಂಜು ಪಾವಗಡ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಗ್ ಬಾಸ್ 120 ದಿನಗಳ ಯಾನ ಮುಕ್ತಾಯಗೊಂಡಿದೆ.

ಹೆಸರಾಂತ ನಟ, ಬಿಗ್ ಬಾಸ್  ನಿರೂಪಕ ಸುದೀಪ್ ಅವರು ಬಿಗ್ ಬಾಸ್​ ಮನೆಯೊಳಗೆ ಹೋಗಿ ಇಬ್ಬರು ಫೈನಲಿಸ್ಟ್​ಗಳಾದ ಮಂಜು ಪಾವಗಡ ಹಾಗೂ ಅರವಿಂದ್ ಕೆ.ಪಿ.  ಅವರನ್ನು ಕೈ ಹಿಡಿದು ವೇದಿಕೆಗೆ ಕರೆ ತಂದರು.

ಫೈನಲಿಸ್ಟ್​ಗಳು ವೇದಿಕೆ ಕಾಲಿಡುತ್ತಿದ್ದಂತೆಯೇ ನೆರೆದಿದವರ ಚಪ್ಪಾಳೆ ಜೋರಾಯಿತು. ಫಲಿತಾಂಶ ಪ್ರಕಟಿಸುವ ಮುನ್ನ ಸುದೀಪ್ ಅವರು ಇತರೆ ಸ್ಪರ್ಧಿಗಳನ್ನು ಯಾರು ಜಯಗಳಿಸಬೇಕೆಂಬುದು ನಿಮ್ಮ ಇಷ್ಟ ಎನ್ನುತ್ತಾರೆ. ಆಗ ಶಮಂತ್ ಹಾಗೂ ದಿವ್ಯಾ ಉರುಡುಗ ಅವರನ್ನು ಹೊರತು ಪಡಿಸಿ ಉಳಿದವರೆಲ್ಲ ಮಂಜು ಅವರೇ ಗೆಲ್ಲಬೇಕು ಎಂದು. ಅದರಲ್ಲೂ ಮಂಜು ಅವರ ಬಾರಿ ನಿಂದಕರಾದ ಚಕ್ರವರ್ತಿ ಹಾಗೂ ಪ್ರಶಾಂತ್​ ಅವರು ಕೂಡ ಮಂಜು ಗೆಲ್ಲಬೇಕು ಎಂದು ಹೇಳುತ್ತಾರೆ. ಕೊನೆಗೂ 17 ವಾರಗಳ ಕಾಲ ನಡೆದ ಜರ್ನಿಗೆ ನಿನ್ನೆ ಅದ್ದೂರಿಗೆ ತೆರೆ ಎಳೆಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು