3:17 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಬಿಗ್ ಬಾಸ್ ಮನೆಗೆ ಹುಲಿವೇಷದ ತಂಡ ಎಂಟ್ರಿ!: ಟೈಗರ್ ಡ್ಯಾನ್ಸ್ ಮಾಡುತ್ತಾ ಸ್ವಾಗತಿಸಿದ ನಟ ರೂಪೇಶ್ ಶೆಟ್ಟಿ!!

28/12/2022, 17:12

ಮಂಗಳೂರು(reporterkarnataka.com): ಬಿಗ್​ ಬಾಸ್​ ಸೀಸನ್​ 9 ಸೀಸನ್ ರ ಫಿನಾಲೆಗೆ ಇನ್ನು ಕೆಲವೇ ಕೆಲವು ದಿನಗಳು ಉಳಿದಿರುವಾಗ ಬಿಗ್ ಬಾಸ್ ಮತ್ತಷ್ಟು ಜನರ ಮನಗೆಲ್ಲಲಾರಂಭಿಸಿದೆ. ಇದರ ನಡುವೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.

ಫಿನಾಲೆಗೆ ಇನ್ನೂ ಕೆಲ ದಿನಗಳು ಬಾಕಿ ಇರುವಾಗಲೇ ಸ್ಪರ್ಧಿಗಳಿಗೆ ಹೊಸ ಹೊಸ ಟ್ವಿಸ್ಟ್ ಸಿಗ್ತಾ ಇದೆ. ತಮ್ಮ ಅಚ್ಚುಮೆಚ್ಚಿನವರು ದೊಡ್ಮೆಗೆ ಎಂಟ್ರಿ ಆಗ್ತಾ ಇರುವ ಹೊತ್ತಿನಲ್ಲಿ ಬಿಗ್ ಬಾಸ್ ಮನೆಗೆ ತುಳುನಾಡಿನ ಹುಲಿಕುಣಿತ ತಂಡವು ಪ್ರವೇಶ ಆಗಿರುವುದು ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡ್ತಾ ಇದೆ. ಹುಲಿಕುಣಿತ ತಂಡದ ಹುಲಿವೇಷಧಾರಿಗಳು ಎಂಟ್ರಿ ಆಗ್ತಾ ಇದ್ದಂತೆ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಕುಣಿಯುತ್ತಲೇ ಬಂದು ತಂಡವನ್ನು ಸ್ವಾಗತಿಸಿದರು. ರೂಪೇಶ್ ಶೆಟ್ಟಿ ಅವರಿಗೆ ಹುಲಿಕುಣಿತದ ತಂಡ ನೋಡಿ ಭರ್ಜರಿ ಸ್ಪೆಪ್ಸ್ ಹಾಕಿಯೇ ಬಿಟ್ಟರೂ ಉಳಿದ ಸ್ಪರ್ಧಿಗಳು ಕೂಡ ಹುಲಿ ಕುಣಿತಕ್ಕೆ ಹೆಜ್ಜೆ ಹಾಕಿದ್ದು ಕಂಡು ಬಂತು.

ಕರಾವಳಿ ಭಾಗದಲ್ಲಿ ವಿಶಿಷ್ಟ ಛಾಪು ಮುಡಿಸಿರುವ ಹುಲಿವೇಷ ಕುಣಿತವು ತುಳುನಾಡಿನ ಹೆಮ್ಮೆಯೆಂದೆ ಹೇಳಬಹುದು. ಬಿಗ್ ಬಾಸ್ ಮನೆಯಲ್ಲಿ ಹುಲಿ ವೇಷಧಾರಿಗಳು ತಮ್ಮ ಕುಣಿತದ ಪಟ್ಟು, ಚಳಕ ತೋರಿಸಿದ್ದು ಕರಾವಳಿಯ ವೈಶಿಷ್ಟ್ಯವನ್ನು ಹೆಚ್ಚಿಸಿದಂತೆ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು