9:40 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಬಿಗ್ ಬಾಸ್ ಮನೆಯೊಳಗೆ ಕೋಸ್ಟಲ್ ವುಡ್ ನಟ ರೂಪೇಶ್ ಶೆಟ್ಟಿ ಎಂಟ್ರಿ!: ಕರಾವಳಿಯಲ್ಲಿ ಹೊಸ ಕಲರವ!

06/08/2022, 21:05

ಮಂಗಳೂರು(reporterkarnataka.com): ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಷೋ ಬಿಗ್‌ಬಾಸ್ ಓಟಿಟಿ ಸೀಸನ್-1 ಕ್ಕೆ ಇಂದು ಅಧಿಕೃತ ಚಾಲನೆ ದೊರೆತಿದ್ದು, ಕೋಸ್ಟಲ್ ವುಡ್ ನಟ, ನಿರ್ದೇಶಕ ರೂಪೇಶ್ ಶೆಟ್ಟಿ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ.

ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗೂರೂಜಿ, ಸೋನು ಶ್ರೀನಿವಾಸ್ ಗೌಡ ಬಿಗ್ ಬಾಸ್ ಮನೆ ಸೇರಿದ್ದಾರೆ. ಕರಾವಳಿಯಿಂದ ನಟ, ನಿರೂಪಕ ರೂಪೇಶ್ ಶೆಟ್ಟಿ ಕೂಡ ಬಿಗ್‌ಬಾಸ್ ಮನೆಯೊಳಗೆ ಪ್ರವೇಶಿಸಿದ್ದಾರೆ.

ತುಳು ನಿರೂಪಕನಾಗಿ ಕರಾವಳಿ ತುಂಬಾ ಜನಪ್ರಿಯತೆ ಪಡೆದಿದ್ದ ರೂಪೇಶ್ ಅವರು ನಂತರ ತುಳು ಚಿತ್ರರಂಗದ ಮೂಲಕ ಬೆಳ್ಳಿಪರದೆಗೆ ಪಾದರ್ಪಣೆ ಮಾಡಿದ್ದರು. ಇಂದು ರೂಪೇಶ್ ಶೆಟ್ಟಿ ಅವರು ಕರಾವಳಿ ಮಾತ್ರವಲ್ಲ ಕರ್ನಾಟಕದಾದ್ಯಂತ ಚಿರಪರಿಚಿತರು.ನಿಶ್ಯಬ್ದ-2, ಡೇಂಜರ್ ಝೇನ್, ಪಿಶಾಚಿ-2 ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

2018ರಲ್ಲಿ ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿದ ‘ಅಮ್ಮರ್ ಪೊಲೀಸಾ’, ಇತ್ತೀಚೆಗೆ ಬಿಡುಗಡೆಯಾದ ಗಿರ್‌ಗಿಟ್ ಸಿನಿಮಾ ಹಿಟ್ ಆಗಿ ಹೆಸರು ತಂದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು