8:19 AM Saturday21 - September 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,…

ಇತ್ತೀಚಿನ ಸುದ್ದಿ

ಬಿಗ್ ಬಾಸ್ 13ರಲ್ಲಿ ವಿಜೇತರಾಗಿದ್ದ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ

02/09/2021, 19:27

ಹಿಂದಿ ಕಿರುತೆರೆ ನಟ ಸಿದ್ದಾರ್ಥ್ ಶುಕ್ಲಾ ನಿಧನರಾಗಿದ್ದಾರೆ. ‘ಬಿಗ್ ಬಾಸ್ 13’ರಲ್ಲಿ ವಿಜೇತರಾಗಿದ್ದ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದ ಗುರುವಾರ ಸಾವನ್ನಪ್ಪಿದ್ದಾರೆ.

40 ವರ್ಷ ವಯಸ್ಸಿನ ಸಿದ್ದಾರ್ಥ್ ಶುಕ್ಲಾ ಅಕಾಲಿಕ ನಿಧನವನ್ನು
ಮುಂಬೈನ ಕೂಪರ್ ಆಸ್ಪತ್ರೆ ದೃಢಪಡಿಸಿದೆ. ನಿದ್ದೆ ಮಾಡುವ ಮುನ್ನ ಕೆಲ ಔಷಧಿಗಳನ್ನು ಸಿದ್ದಾರ್ಥ್ ಶುಕ್ಲಾ ಸೇವಿಸಿದ್ದರು ಎನ್ನಲಾಗಿದೆ. ಹೃದಯಾಘಾತದಿಂದ ಸಿದ್ದಾರ್ಥ್ ಶುಕ್ಲಾ ನಿಧನರಾಗಿದ್ದಾರೆ ಎಂದು ಕೂಪರ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಸದ್ಯ ಸಿದ್ದಾರ್ಥ್ ಶುಕ್ಲಾ ಅವರ ಮೃತದೇಹದ ಪೋಸ್ಟ್ ಮಾರ್ಟಂ ನಡೆಯುತ್ತಿದೆ.

ಡಿಸೆಂಬರ್ 12, 1980 ರಂದು ಮುಂಬೈನಲ್ಲಿ ಜನಿಸಿದವರು ಸಿದ್ದಾರ್ಥ್ ಶುಕ್ಲಾ. ಅಶೋಕ್ ಶುಕ್ಲಾ-ರಿತಾ ಶುಕ್ಲಾ ದಂಪತಿಯ ಮಗನಾಗಿ ಜನಿಸಿದ ಸಿದ್ದಾರ್ಥ್ ಶುಕ್ಲಾ ಇಂಟೀರಿಯರ್ ಡಿಸೈನಿಂಗ್‌ನಲ್ಲಿ ಪದವಿ ಪಡೆದಿದ್ದರು. ಇಂಟೀರಿಯರ್ ಡಿಸೈನರ್ ಆಗಿ ಕೆಲ ವರ್ಷ ಕೆಲಸ ಮಾಡಿದ ಸಿದ್ದಾರ್ಥ್ ಶುಕ್ಲಾ ಮಾಡೆಲಿಂಗ್ ಲೋಕಕ್ಕೆ ಕಾಲಿಟ್ಟರು. 2005ರಲ್ಲಿ ಟರ್ಕಿಯಲ್ಲಿ ನಡೆದ ‘ವರ್ಲ್ಡ್ಸ್ ಬೆಸ್ಟ್ ಮಾಡೆಲ್’ ಸ್ಪರ್ಧೆಯಲ್ಲಿ ಭಾಗವಹಿಸಿ ಗೆಲುವಿನ ನಗೆ ಬೀರಿದರು. ನಂತರ ಅನೇಕ ಜಾಹೀರಾತುಗಳಲ್ಲಿ ಸಿದ್ದಾರ್ಥ್ ಶುಕ್ಲಾ ಕಾಣಿಸಿಕೊಂಡರು.

ಸಿದ್ದಾರ್ಥ್ ಶುಕ್ಲಾ ಹಿಂದಿ ಕಿರುತೆರೆಗೆ ಪದಾರ್ಪಣೆ ಮಾಡಿದ್ದು 2008 ರಲ್ಲಿ. ಅದು ‘ಬಾಬುಲ್ ಕಾ ಆಂಗನ್ ಚೂಟೇ ನಾ’ ಧಾರಾವಾಹಿ ಮೂಲಕ. ಬಳಿಕ ‘ಲವ್ ಯೂ ಜಿಂದಗಿ’, ‘ಬಾಲಿಕಾ ವಧು’, ‘ದಿಲ್ ಸೇ ದಿಲ್ ತಕ್’ ಧಾರಾವಾಹಿಗಳಲ್ಲಿ ಸಿದ್ದಾರ್ಥ್ ಶುಕ್ಲಾ ಅಭಿನಯಿಸಿದರು. ಇವು ಸಿದ್ದಾರ್ಥ್ ಶುಕ್ಲಾಗೆ ಅಪಾರ ಜನಪ್ರಿಯತೆ ತಂದುಕೊಟ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು