2:32 PM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಬಿಹಾರದ ಕಿಶನ್ ಗಂಜ್‍ನಲ್ಲಿ ಕಾಫಿನಾಡು ಚಿಕ್ಕಮಗಳೂರಿನ ಯೋಧನ ಮೃತದೇಹ ಪತ್ತೆ 

13/06/2022, 10:04

ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು
info.reporterkarnataka@gmail.com

ರಜೆಗೆ ಮನೆಗೆ ಬಂದಿದ್ದ ತಾಲೂಕಿನ ಖಾಂಡ್ಯ ಸಮೀಪದ ಮಸಿಗದ್ದೆ ಗ್ರಾಮದ ಯೋಧ ಗಣೇಶ್ ಮೃತದೇಹ ಬಿಹಾರದ ಕಿಶನ್ ಗಂಜ್‍ನಲ್ಲಿ ಪತ್ತೆಯಾಗಿದೆ. 

ಮೃತ ಯೋಧ ಗಣೇಶ್ 15 ದಿನದ ಹಿಂದೆ ರಜೆ ಹಾಕಿ ಊರಿಗೆ ಬಂದಿದ್ದರು. 12ನೇ ತಾರೀಖು ಸೇನೆ ತಂಡ ಕೂಡಿಕೊಳ್ಳಬೇಕಾದ ಕಾರಣ ಮೊನ್ನೆ ಜೂನ್ 9ರಂದು ಮನೆಯಿಂದ ವಾಪಸ್ ಹೋಗಿದ್ದರು. ಇಂದು ಸೇನೆ ತಂಡ ಕೂಡಿಕೊಳ್ಳಬೇಕಿತ್ತು. ಆದರೆ, ಸೇನೆಗೆ ಹೋಗುವ ಮುನ್ನವೇ ಬಿಹಾರದ ಕಿಶನ್‍ಗಂಜ್‍ನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ನಿನ್ನೆ ಬೆಳಗ್ಗೆ ಅವರ ಪತ್ನಿ ಗಣೇಶ್ ಜೊತೆ ಮಾತನಾಡಿದ್ದರು. ಆಗ ಅವರು ಮುಖ ತೊಳೆಯುತ್ತಿದ್ದೇನೆ ಎಂದು ಹೇಳಿದ್ದರು. ಆದರೆ, ಮಧ್ಯಾಹ್ನದ ನಂತರ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಮತ್ತೆ ಕರೆ ಮಾಡಿಲ್ಲ. ಆದರೆ, ನಿನ್ನೆ ರಾತ್ರಿ ಸೇನೆ ಅಧಿಕಾರಿಗಳು ಕರೆ ಮಾಡಿ ಗಣೇಶ್ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಬಿಹಾರದ ಕಿಶನ್ ಗಂಜ್‍ನಲ್ಲಿ ಅವರ ಮೃತದೇಹ ಕಂಡ ಆಂಬುಲೆನ್ಸ್ ಚಾಲಕ ಜೇಬಿನಲ್ಲಿದ್ದ ಐಡಿ ಕಾರ್ಡ್ ಹಾಗೂ ಆರ್ಮಿಯ ಪಾಸ್‍ಔಟ್ ನೋಡಿ ಈತ ಯೋಧ ಎಂದು ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸೇನೆಗೆ ವಾಪಸ್ ಹೋಗೇ ಇಲ್ಲ. ಅವರು ಹೇಗೆ ಸಾವನ್ನಪ್ಪಿದರು ಎಂಬುದು ಕುಟುಂಬಸ್ಥರು ಹಾಗೂ ಸ್ಥಳಿಯರಲ್ಲಿ ಯಕ್ಷಪ್ರಶ್ನೆಯಾಗಿದೆ. ತಾಲೂಕಿನ ಮಸಿಗದ್ದೆ ಗ್ರಾಮದ ನಾಗಯ್ಯ-ಗಂಗಮ್ಮ ದಂಪತಿಯ ಪುತ್ರನಾದ ಗಣೇಶ್ ಕಳೆದ 14 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೃತ ಯೋಧ ಗಣೇಶ್ ಪ್ರಸ್ತುತ ಜಮ್ಮುವಿನಲ್ಲಿ ಸಿಗ್ನಲ್ ರೆಜಿಮೆಂಟ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮೃತ ಗಣೇಶ್ ಐದು ವರ್ಷದ ಓರ್ವ ಹೆಣ್ಣು ಮಗಳಿದ್ದಾಳೆ. ಕಳೆದ ಮೂರು ವರ್ಷಗಳ ಹಿಂದೆ ನಾಗಯ್ಯ-ಗಂಗಮ್ಮ ದಂಪತಿಯ ಇನ್ನೊಬ್ಬ ಮಗ ಹಾಗೂ ಯೋಧ ಗಣೇಶ್ ಸಹೋದರ ಕೂಡ ತೀರಿಕೊಂಡಿದ್ದರು. ಇದೀಗ ಯೋಧ ಗಣೇಶ್ ಕೂಡ ಸಾವನ್ನಪ್ಪಿದ್ದಾರೆ. ಇದರಿಂದ ಕುಟುಂಬಕ್ಕೆ ಆಧಾರವೇ ಇಲ್ಲದಂತಾಗಿದೆ. ಯೋಧನ ಸಾವಿನಿಂದ ಕುಟುಂಬ ಹಾಗೂ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮೃತ ಯೋಧ ಗಣೇಶ್ ಮನೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು