5:49 AM Monday24 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಬಿಜಗರಣಿ: ಅಂಬೇಡ್ಕರ್ ಭವನ ಉದ್ಘಾಟನೆ, ಗೋದಾಮು, ಗ್ರಾಪಂ ಕಟ್ಟಡಕ್ಕೆ ಶಂಕು ಸ್ಥಾಪನೆ

26/11/2022, 19:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಬಿಜಗರಣಿ ಗ್ರಾಮದಲ್ಲಿ ಭಾರತೀಯ ಸಂವಿಧಾನ ದಿನದ ಪ್ರಯುಕ್ತ ನೂತನವಾಗಿ ನಿರ್ಮಾಣಗೊಂಡ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಭವನವನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಉದ್ಘಾಟಿಸಿದರು.

ಗ್ರಾಮ ಪಂಚಾಯತಿ ಕಟ್ಟಡ ಹಾಗೂ ರೈತರ ಗೋದಾಮ ಕಟ್ಟಡಗಳ ನಿರ್ಮಾಣದ ಕಾರ್ಯಕ್ಕೂ ಅವರು ಶಂಕುಸ್ಥಾಪನೆ ನೆರವೇರಿಸಿದರು.
ವಿಶ್ವದ ಶ್ರೇಷ್ಠ ಸಂವಿಧಾನದ ಮೂಲಕ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆಯ ಹಕ್ಕು ಕೊಟ್ಟಿರುವವರು ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರು. ‘ಭಾರತದ ಸಂವಿಧಾನ’ವು ಅಂಗೀಕಾರವಾದ ಈ ದಿನದಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವರ ಹೆಸರಿನ ಭವನವನ್ನು ಉದ್ಘಾಟಿಸುವ ಮೂಲಕ ಗೌರವಪೂರ್ವಕ ನಮನಗಳನ್ನು ಸಲ್ಲಿಸೋಣ. ಅವರು ಹಾಕಿಕೊಟ್ಟ ಆದರ್ಶದ ಮಾರ್ಗದಲ್ಲಿ ಸಾಗೋಣ ಎಂದು ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಗ್ರಾಮದ ಸ್ವಚ್ಚತೆ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ ಕಸವನ್ನು ಎತ್ತುವ ಸ್ವಚ್ಛವಾಹಿನಿ‌‌ ಎನ್ನುವ ವಾಹನಕ್ಕೆ ಶಾಸಕರು ಚಾಲನೆಯನ್ನು ನೀಡಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ಎಪಿಎಂಸಿ ಚೇರಮನ್ ಯುವರಾಜ ಕದಂ, ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳಕರ್, ಯಲ್ಲಪ್ಪ ಬೆಳಗಾಂವ್ಕರ್, ಮನೋಹರ್ ಬೆಳಗಾಂವ್ಕರ್, ಅಶೋಕ ಚೌಗುಲೆ, ಗ್ರಾಮ ಪಂಚಾಯತಿ ಸದಸ್ಯರು, ಪಂಚಾಯತ ಅಭಿವೃದ್ಧಿ ಅಧಿಕಾರಿ ಹರ್ಷವರ್ಧನ್ ಅಗಸರ, ಪೂಜಾ ಸುತಾರ, ವಿರೇಶ ಹೊಸಮಠ, ಕಾರ್ಯ ನಿರ್ವಾಹಕ ಅಧಿಕಾರಿ ರಾಜೇಶ್ ದಾನವಾಡಕರ್, ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷರಾದ ಅರುಣ ಕಟಾಂಬಳೆ ರಾಜೇಂದ್ರ ಮೊರಬದ, ಗಣೇಶ ಕೆ. ಎಸ್. ನಾಮದೇವ ಮೋರೆ, ಸಂತೋಷ ಕಾಂಬಳೆ, ಪ್ರೇಮ ಕಾಂಬಳೆ ಹಾಗೂ ಗ್ರಾಮದ ಅನೇಕ ಜನರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು