7:53 AM Thursday19 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ…

ಇತ್ತೀಚಿನ ಸುದ್ದಿ

ಬೈಕಂಪಾಡಿ: 120 ವರ್ಷಕ್ಕೂ ಹಳೆಯ ಐತಿಹಾಸಿಕ ಶಾಲೆಗೆ ನೂತನ ಕಟ್ಟಡ ನಿರ್ಮಿಸಲು ಶಿಲಾನ್ಯಾಸ

10/09/2024, 22:02

ಸುರತ್ಕಲ್(reporterkarnataka.com): ಬೈಕಂಪಾಡಿ ಮೊಗವೀರ ಮಹಾಸಭಾದ ಆಡಳಿತಕ್ಕೊಳಪಟ್ಟಿರುವ 120 ವರ್ಷಕ್ಕೂ ಹಿಂದೆ ನಿರ್ಮಿಸಿರುವ ಐತಿಹಾಸಿಕ ಶಾಲೆಯ ಪುನರ್ ನವೀಕರಣ ಸಲುವಾಗಿ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ ಮಂಗಳವಾರ ಬೈಕಂಪಾಡಿ ಇಂದಿರಾ ಮಾಧವ ಸಭಾಂಗಣದಲ್ಲಿ ನೆರವೇರಿತು.


ಮನವಿ ಪತ್ರ ಬಿಡುಗಡೆ ಮಾಡಿ ಮಾತನಾಡಿದ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಅವರು ಬೈಕಂಪಾಡಿ ಶಾಲೆಯನ್ನ ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸಲು ಮನವಿಯನ್ನ ಈಗಾಗಲೇ ನೀಡಲಾಗಿದೆ.
ಶಿಕ್ಷಣ ಮಂತ್ರಿಗಳಲ್ಲಿ ಮಾತುಕತೆ ನಡೆಸಿ ಹೊಸ ಕಟ್ಟಡ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿ ಆಂಗ್ಲ ಮಾಧ್ಯಮವನ್ನು ಕೂಡ ಆರಂಭಿಸುವ ಸಲುವಾಗಿ ಬೇಕಾದ ಅನುಮತಿಯನ್ನು ಪಡೆಯಲಾಗುವುದು ಎಂದು ನುಡಿದರು.
ಪ್ರಸ್ತುತ ಸನ್ನಿವೇಶದಲ್ಲಿ 450 ಮಕ್ಕಳು ಸರಕಾರಿ ಶಾಲೆಗಳಲ್ಲಿ ಕಲಿಕೆಯಲ್ಲಿ ಕಂಡುಬರುವುದು ಬಹು ಅಪರೂಪವಾಗಿದೆ.
ಬೈಕಂಪಾಡಿಯಲ್ಲಿ ವಲಸೆ ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುತ್ತಿದ್ದು ಮೊಗವೀರ ಮಹಾಸಭಾ
ಈ ಒಂದು ಸೇವೆಯು ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಸುನಿತಾ, ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ರಾಮಚಂದರ್ ಬೈಕಂಪಾಡಿ,ಮಹಾಸಭಾ ಅಧ್ಯಕ್ಷ ವಸಂತ ಅಮೀನ್,ಮನಪಾ ಸದಸ್ಯರಾದ ಸುಮಿತ್ರ ಕರಿಯ,
ಶಿಕ್ಷಣ ತಜ್ಞವಾಸುದೇವ ಐತಾಳ್ ಪಿ.,ವಿವಿಧ ಕಂಪನಿಯ ಅಧಿಕಾರಿಗಳು,ಮಹಾಸಭಾದ ಗುರಿಕಾರರು,ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು