2:10 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ…

ಇತ್ತೀಚಿನ ಸುದ್ದಿ

ಬೈಕ್ ಕಳ್ಳತನ ಮಾಡುತ್ತಿದ್ದ ಯುವ ಗ್ಯಾಂಗ್ ಪೊಲೀಸ್ ಬಲೆಗೆ: ಅಥಣಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

03/07/2022, 02:16

ರಾಹುಲ್ ಬೆಳಗಾವಿ
info.reporterkarnataka@gmail.com

ಹಲವು ದಿನಗಳಿಂದ ಅಥಣಿ ತಾಲೂಕಿನಲ್ಲಿ ನಡೆಯುತ್ತಿದ್ದ ಬೈಕ್ ಕಳ್ಳತನಕ್ಕೆ ಅಥಣಿ ಪೊಲೀಸರು ಬ್ರೇಕ್ ಹಾಕಿದ್ದಾರೆ. 6ಕ್ಕೂ ಹೆಚ್ಚು ಬೈಕ್ ಕಳ್ಳತನ ಮಾಡಿದ ಗ್ಯಾಂಗ್ ನ್ನು ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ.

ಪೋಲಿಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ,  ಹೆಚ್ಚುವರಿ ಪೋಲಿಸ್ ಅಧಿಕ್ಷಕ ಮಹಾನಿಂಗ ನಂದಗಾವಿ, ಡಿವೈಎಸ್ಪಿ ಎಸ್ ವಿ ಗಿರೀಶ, ಸಿಪಿಐ ಶಂಕರಗೌಡ ಬಸನಗೌಡ, ಪಿಎಸ್ಐ ಕುಮಾರ ಹಾಡಕಾರ ಅವರ ನೇತೃತ್ವದಲ್ಲಿ ತಂಡ ಬಲೆ ಬೀಸಿ 3 ಮಂದಿ ಆರೋಪಿತರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಸತ್ತಿ ಗ್ರಾಮದ ಆನಂದ ಗುಳಗಾವಿ (20), ಪವನ ಗಾಯಕವಾಡ (20) ಹಾಗೂ ಬರಮಖೋಡಿ ಗ್ರಾಮದ ವಿಕ್ರಮ ಸಾಳುಂಕೆ (20) ಎಂದು ತಿಳಿದು ಬಂದಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ನಿರ್ದೇಶನದಂತೆ ಡಿವೈಎಸ್ಪಿ ಎಸ್. ವಿ. ಗಿರೀಶ್ ಹಾಗೂ ಸಿಪಿಐ ಶಂಕರಗೌಡ ಬಸನಗೌಡ ಅವರ ಮಾರ್ಗದರ್ಶನದಂತೆ ಪಿಎಸ್ಐ ಕುಮಾರ ಹಾಡಕರ ಅವರ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ರಚನೆ ಮಾಡಿ ಸತತ ಕಾರ್ಯಾಚಣೆ ನಡೆಸಿ ಮೋಟಾರ್ ಸೈಕಲ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಅಥಣಿ ಪೋಲಿಸ್ ಇಲಾಖೆ ಯಶಸ್ವಿಯಾಗಿದೆ. 


ಈ ವೇಳೆ ವಿ ಜಿ ಆರೇರ, ಬಿ ಜೆ ತಳವಾರ, ಎ ಎ ಇರಕರ, ಜಿ ಎಚ್ ಹೊನವಾಡ, ಜಮೀರ ಡಾಂಗೆ, ಕೆ ಬಿ ಸಿರಗೂರ, ಆರ್ ಸಿ ಹಾದಿಮನಿ, ಎಮ್ ಎಮ್ ಖೋತ್ ಸೇರಿದಂತೆ ಇತರರು ತಂಡದಲ್ಲಿ ಭಾಗಿಯಾಗಿದ್ದರು.

ಪೊಲೀಸರ ಕಾರ್ಯಕ್ಕೆ ಜನ ಸಾಮಾನ್ಯರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು