1:38 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಲೂಕಿನಲ್ಲಿ ಬೈಕ್ ರ‍್ಯಾಲಿ: ಹಸಿರು ಪರಿಸರ ಕಾಪಾಡುವಂತೆ ಶಾಸಕಿ ನಯನಾ ಮೋಟಮ್ಮ ಕರೆ

29/11/2025, 17:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯಲ್ಲಿ ಅತ್ಯಧಿಕ ಪ್ರವಾಸಿ ತಾಣಗಳನ್ನು ಹೊಂದಿರುವ ಮೂಡಿಗೆರೆ ತಾಲೂಕು ವರ್ಷಪೂರ್ತಿ ಹಸಿರುಮಯ ವಾತಾವರಣದಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಸುಂದರ ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಇಲ್ಲಿ ಭೇಟಿ ನೀಡುವ ಚಾರಣಿಗರೂ ಸಹ ಪ್ರಕೃತಿಯನ್ನು ಕಾಪಾಡಬೇಕು ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.
ಪ್ರವಾಸೋದ್ಯಮ ಇಲಾಖೆ ಹಾಗೂ ತಾಲ್ಲೂಕಿನ ಹೋಂ ಸ್ಟೇ–ರೆಸಾರ್ಟ್ ಮಾಲೀಕರು ವತಿಯಿಂದ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಪಟ್ಟಣದ ಲಯನ್ಸ್ ವೃತ್ತದಲ್ಲಿ ಹಸಿರು ನಿಷಾಣೆ ತೋರಿಸಿ ಉದ್ಘಾಟನೆ ಮಾಡಿದ ಅವರು ಮಾತನಾಡಿದರು.


ರಾಜ್ಯದ ವಿವಿಧ ಭಾಗಗಳು ಸೇರಿದಂತೆ ಹೊರರಾಜ್ಯಗಳಿಂದಲೂ ಮೂಡಿಗೆರೆಗೆ ಪ್ರವಾಸಿಗರ ಸಂಚಾರ ಹೆಚ್ಚುತ್ತಿರುವುದು ತಾಲ್ಲೂಕಿನ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿದೆ. ಆದರೆ ಪ್ರವಾಸಿಗರು ಮಲಿನ ಮಾಡದೇ, ಪ್ಲಾಸ್ಟಿಕ್ ಬಳಕೆ ತಪ್ಪಿಸಿ, ಬೆಟ್ಟಗುಡ್ಡಗಳ ಪರಿಸರವನ್ನು ಹಾನಿಗೊಳಿಸದೆ ಸುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು. ಪ್ರಕೃತಿಯನ್ನು ಕಾಪಾಡುವುದು ಮುಂದಿನ ತಲೆಮಾರಿಗೆ ನಮ್ಮಿಂದ ಆಗಬೇಕಾದ ಮುಖ್ಯ ಹೊಣೆ ಎಂದು ಶಾಸಕಿ ಹಿತರಕ್ಷಕ ಸಂದೇಶ ನೀಡಿದರು.
87 ಬೈಕರ್ ಹಾಗೂ ಬ್ಲಾಗರ್‌ಗಳ ಭಾಗವಹಿಸಿದ್ದರು.
ಬೈಕ್ ರ‍್ಯಾಲಿಯಲ್ಲಿ ಸುಮಾರು 87 ಬೈಕರ್‌ಗಳು ಮತ್ತು ಬ್ಲಾಗರ್‌ಗಳು ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದರು.
ಕಾರ್ಯಕ್ರಮ ಉದ್ಧೇಶಿಸಿ ಮಾತನಾಡಿದ ಹಾಸನದ ಬೈಕರ್ ಭೂಷಣ್ ಜೈನ್ ಅವರು, ಮೂಡಿಗೆರೆ ತಾಲೂಕು ನಿಜಕ್ಕೂ “ಮಲೆನಾಡಿನ ಸ್ವರ್ಗ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ದೇವರ ಮನೆ, ಎತ್ತಿನಬುಜ, ರಾಣಿ ಜರಿ, ದುರ್ಗದಹಳ್ಳಿ, ಕೊಟ್ಟಿಗೆಹಾರ ಸೇರಿದಂತೆ ಕುತೂಹಲ ಕಾರಕ ಪ್ರವಾಸಿ ತಾಣಗಳು ಪ್ರವಾಸಿಗರನ್ನು ಸೆಳೆಯುತ್ತವೆ. ಪ್ರವಾಸಪ್ರಿಯರು ಇಲ್ಲಿಗೆ ಭೇಟಿ ನೀಡಿ ನೈಸರ್ಗಿಕ ಸೌಂದರ್ಯವನ್ನು ಕಣ್ತುಂಬಿಕೊಳ್ಳಬೇಕೆಂದು ಅವರು ಕರೆ ನೀಡಿದರು.
ಮೂಡಿಗೆರೆ ಹೋಂ ಸ್ಟೇ ಅಸೋಸಿಯೇಶನ್ ಮತ್ತು ಚಿಕ್ಕಮಗಳೂರು ಪ್ರವಾಸೋದ್ಯಮ ಇಲಾಖೆ ತುಂಬ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಿದ್ದನ್ನು ಅವರು ಶ್ಲಾಘಿಸಿ, ಇಂತಹ ಕಾರ್ಯಕ್ರಮಗಳನ್ನು ವರ್ಷಗಟ್ಟಲೆ ನಡೆಸುವುದರಿಂದ ಪ್ರವಾಸೋದ್ಯಮ ಮತ್ತಷ್ಟು ಬೆಳವಣಿಗೆ ಕಾಣುತ್ತದೆ ಎಂದು ಹೇಳಿದರು.
ಎತ್ತಿನಬುಜಕ್ಕೆ ತೆರಳುವ ದಾರಿಯಲ್ಲಿ ಮಹಿಳೆಯರಿಗಾಗಿ ಶೌಚಾಲಯದ ಅಗತ್ಯವಿದ್ದು, ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಂಡರೆ ಪ್ರವಾಸಿಗರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಹೇಳಿದರು.
ಹೋಂ ಸ್ಟೇ ಮಾಲೀಕರ ಸಂಘದ ಅಧ್ಯಕ್ಷ ಜಗಣ್ಣ ಗುತ್ತಿ, ಕಾರ್ಯದರ್ಶಿ ರಾಘವೇಂದ್ರ ಕೆಸವಳಲು, ಉಪಾಧ್ಯಕ್ಷ ರಂಜನ್ ಅಜಿತ್ ಕುಮಾರ್, ಖಜಾಂಚಿ ಬಿ.ಎಂ. ಸತೀಶ್, ಸಂಜಯ್ ಕೊಟ್ಟಿಗೆಹಾರ, ಕಾರ್ತಿಕ್ ಪಟದೂರು, ರೀತೀಶ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು