4:48 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

15/10/2024, 19:39

ಶಶಿ ಬೆತ್ತದಕೊಳಲು ಜಯಪುರ

info.reporterkarnataka@gmaio.com

ಬಿಳಾಲುಕೊಪ್ಪದಿಂದ ಬಸರೀಕಟ್ಟೆ ಹೋಗುವ ರಸ್ತೆಯ ಅಕ್ಕಪಕ್ಕ ಮಣ್ಣುಹಾಕಿದ್ದು ಮಳೆಗೆ ರಸ್ತೆ ಕೆಸರುಮಯವಾಗಿ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ.


ಮೊದಲೇ ಹೊಂಡ ಗುಂಡಿಯಿಂದ ಕೂಡಿದ್ದ ಈ ಕಿರಿದಾದ ರಸ್ತೆಯಲ್ಲಿ ಓಡಾಡುವುದೇ ಸಮಸ್ಯೆಯಾಗಿತ್ತು. ಆದರೆ ಈಗ ರಸ್ತೆಯ ಎರಡು ಬದಿಯಲ್ಲೂ ಮಣ್ಣು ಹಾಕಲಾಗಿದೆ. ಎರಡ್ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸವಾರರಿಗೆ ಓಡಾಡಲು ಸಮಸ್ಯೆಯಾಗಿದೆ. ಈ ರಸ್ತೆಯೂ ಹೊರನಾಡು ಮತ್ತು ಶೃಂಗೇರಿ ಮುಖ್ಯ ರಸ್ಯೆಯೂ ಹೌದು. ದಸರ ರಜೆಯೂ ಇರುವುದರಿಂದ ವಾಹನದಟ್ಟನೆ ಜಾಸ್ತಿ ಇದೆ. ರಸ್ತೆ ಕೆಸರುಮಯವಾಗಿದ್ದಕ್ಕೂ, ಕಿರಿದಾದ ಹೊಂಡ ಗುಂಡಿ ಇರುವ ರಸ್ತೆಯಾಗಿದ್ದಕ್ಕೂ ಪ್ರತಿದಿನ ಓಡಾಡುವ ಬಸ್ಸುಗಳು ಎದುರಿನಿಂದ ಬರುವ ವಾಹನಗಳಿಗೆ ಜಾಗಬಿಡಲು ರಸ್ತೆಯಿಂದ ಕೆಳಗೆ ಇಳಿಸಿದಾಗ ಬಸ್ಸುಗಳು ಕೆಸರಿಗೆ ಸಿಲುಕುತ್ತಿದ್ದಾವೆ.
ಹೀಗಾಗಿ ಇಂದು ಮಧ್ಯಾಹ್ನದ ನಂತರ ಬಸ್ಸುಗಳು ಬಸರೀಕಟ್ಟೆಯಿಂದ ಬಿಳಾಲುಕೊಪ್ಪ ಕೊಗ್ರೆ ಮೂಲಕ ಜಯಪುರಕ್ಕೆ ಹೋಗಬೇಕಿದ್ದ ಮಾರ್ಗವನ್ನು ಬದಲಾಯಿಸಿ
ಬಸರೀಕಟ್ಟೆಯಿಂದ ಹೇರೂರು ಮಾರ್ಗ ಮೂಲಕ ಜಯಪುರಕ್ಕೆ ತಲುಪುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು