8:38 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

15/10/2024, 19:39

ಶಶಿ ಬೆತ್ತದಕೊಳಲು ಜಯಪುರ

info.reporterkarnataka@gmaio.com

ಬಿಳಾಲುಕೊಪ್ಪದಿಂದ ಬಸರೀಕಟ್ಟೆ ಹೋಗುವ ರಸ್ತೆಯ ಅಕ್ಕಪಕ್ಕ ಮಣ್ಣುಹಾಕಿದ್ದು ಮಳೆಗೆ ರಸ್ತೆ ಕೆಸರುಮಯವಾಗಿ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ.


ಮೊದಲೇ ಹೊಂಡ ಗುಂಡಿಯಿಂದ ಕೂಡಿದ್ದ ಈ ಕಿರಿದಾದ ರಸ್ತೆಯಲ್ಲಿ ಓಡಾಡುವುದೇ ಸಮಸ್ಯೆಯಾಗಿತ್ತು. ಆದರೆ ಈಗ ರಸ್ತೆಯ ಎರಡು ಬದಿಯಲ್ಲೂ ಮಣ್ಣು ಹಾಕಲಾಗಿದೆ. ಎರಡ್ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸವಾರರಿಗೆ ಓಡಾಡಲು ಸಮಸ್ಯೆಯಾಗಿದೆ. ಈ ರಸ್ತೆಯೂ ಹೊರನಾಡು ಮತ್ತು ಶೃಂಗೇರಿ ಮುಖ್ಯ ರಸ್ಯೆಯೂ ಹೌದು. ದಸರ ರಜೆಯೂ ಇರುವುದರಿಂದ ವಾಹನದಟ್ಟನೆ ಜಾಸ್ತಿ ಇದೆ. ರಸ್ತೆ ಕೆಸರುಮಯವಾಗಿದ್ದಕ್ಕೂ, ಕಿರಿದಾದ ಹೊಂಡ ಗುಂಡಿ ಇರುವ ರಸ್ತೆಯಾಗಿದ್ದಕ್ಕೂ ಪ್ರತಿದಿನ ಓಡಾಡುವ ಬಸ್ಸುಗಳು ಎದುರಿನಿಂದ ಬರುವ ವಾಹನಗಳಿಗೆ ಜಾಗಬಿಡಲು ರಸ್ತೆಯಿಂದ ಕೆಳಗೆ ಇಳಿಸಿದಾಗ ಬಸ್ಸುಗಳು ಕೆಸರಿಗೆ ಸಿಲುಕುತ್ತಿದ್ದಾವೆ.
ಹೀಗಾಗಿ ಇಂದು ಮಧ್ಯಾಹ್ನದ ನಂತರ ಬಸ್ಸುಗಳು ಬಸರೀಕಟ್ಟೆಯಿಂದ ಬಿಳಾಲುಕೊಪ್ಪ ಕೊಗ್ರೆ ಮೂಲಕ ಜಯಪುರಕ್ಕೆ ಹೋಗಬೇಕಿದ್ದ ಮಾರ್ಗವನ್ನು ಬದಲಾಯಿಸಿ
ಬಸರೀಕಟ್ಟೆಯಿಂದ ಹೇರೂರು ಮಾರ್ಗ ಮೂಲಕ ಜಯಪುರಕ್ಕೆ ತಲುಪುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು