12:28 PM Sunday22 - June 2025
ಬ್ರೇಕಿಂಗ್ ನ್ಯೂಸ್
Bagalkote | ಪಟ್ಟದಕಲ್ಲು ವಿಶ್ವ ಪರಂಪರೆ ತಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… Udupi | ನೈತಿಕ ಪಾಠ ಶಾಸಕ ಸುನಿಲ್ ಕುಮಾರ್ ಹೇಳಿ ಕೊಡಬೇಕಿಲ್ಲ: ಸಚಿವೆ… ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ… Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

ಇತ್ತೀಚಿನ ಸುದ್ದಿ

ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

15/10/2024, 19:39

ಶಶಿ ಬೆತ್ತದಕೊಳಲು ಜಯಪುರ

info.reporterkarnataka@gmaio.com

ಬಿಳಾಲುಕೊಪ್ಪದಿಂದ ಬಸರೀಕಟ್ಟೆ ಹೋಗುವ ರಸ್ತೆಯ ಅಕ್ಕಪಕ್ಕ ಮಣ್ಣುಹಾಕಿದ್ದು ಮಳೆಗೆ ರಸ್ತೆ ಕೆಸರುಮಯವಾಗಿ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ.


ಮೊದಲೇ ಹೊಂಡ ಗುಂಡಿಯಿಂದ ಕೂಡಿದ್ದ ಈ ಕಿರಿದಾದ ರಸ್ತೆಯಲ್ಲಿ ಓಡಾಡುವುದೇ ಸಮಸ್ಯೆಯಾಗಿತ್ತು. ಆದರೆ ಈಗ ರಸ್ತೆಯ ಎರಡು ಬದಿಯಲ್ಲೂ ಮಣ್ಣು ಹಾಕಲಾಗಿದೆ. ಎರಡ್ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸವಾರರಿಗೆ ಓಡಾಡಲು ಸಮಸ್ಯೆಯಾಗಿದೆ. ಈ ರಸ್ತೆಯೂ ಹೊರನಾಡು ಮತ್ತು ಶೃಂಗೇರಿ ಮುಖ್ಯ ರಸ್ಯೆಯೂ ಹೌದು. ದಸರ ರಜೆಯೂ ಇರುವುದರಿಂದ ವಾಹನದಟ್ಟನೆ ಜಾಸ್ತಿ ಇದೆ. ರಸ್ತೆ ಕೆಸರುಮಯವಾಗಿದ್ದಕ್ಕೂ, ಕಿರಿದಾದ ಹೊಂಡ ಗುಂಡಿ ಇರುವ ರಸ್ತೆಯಾಗಿದ್ದಕ್ಕೂ ಪ್ರತಿದಿನ ಓಡಾಡುವ ಬಸ್ಸುಗಳು ಎದುರಿನಿಂದ ಬರುವ ವಾಹನಗಳಿಗೆ ಜಾಗಬಿಡಲು ರಸ್ತೆಯಿಂದ ಕೆಳಗೆ ಇಳಿಸಿದಾಗ ಬಸ್ಸುಗಳು ಕೆಸರಿಗೆ ಸಿಲುಕುತ್ತಿದ್ದಾವೆ.
ಹೀಗಾಗಿ ಇಂದು ಮಧ್ಯಾಹ್ನದ ನಂತರ ಬಸ್ಸುಗಳು ಬಸರೀಕಟ್ಟೆಯಿಂದ ಬಿಳಾಲುಕೊಪ್ಪ ಕೊಗ್ರೆ ಮೂಲಕ ಜಯಪುರಕ್ಕೆ ಹೋಗಬೇಕಿದ್ದ ಮಾರ್ಗವನ್ನು ಬದಲಾಯಿಸಿ
ಬಸರೀಕಟ್ಟೆಯಿಂದ ಹೇರೂರು ಮಾರ್ಗ ಮೂಲಕ ಜಯಪುರಕ್ಕೆ ತಲುಪುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು