3:04 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

15/10/2024, 19:39

ಶಶಿ ಬೆತ್ತದಕೊಳಲು ಜಯಪುರ

info.reporterkarnataka@gmaio.com

ಬಿಳಾಲುಕೊಪ್ಪದಿಂದ ಬಸರೀಕಟ್ಟೆ ಹೋಗುವ ರಸ್ತೆಯ ಅಕ್ಕಪಕ್ಕ ಮಣ್ಣುಹಾಕಿದ್ದು ಮಳೆಗೆ ರಸ್ತೆ ಕೆಸರುಮಯವಾಗಿ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ.


ಮೊದಲೇ ಹೊಂಡ ಗುಂಡಿಯಿಂದ ಕೂಡಿದ್ದ ಈ ಕಿರಿದಾದ ರಸ್ತೆಯಲ್ಲಿ ಓಡಾಡುವುದೇ ಸಮಸ್ಯೆಯಾಗಿತ್ತು. ಆದರೆ ಈಗ ರಸ್ತೆಯ ಎರಡು ಬದಿಯಲ್ಲೂ ಮಣ್ಣು ಹಾಕಲಾಗಿದೆ. ಎರಡ್ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸವಾರರಿಗೆ ಓಡಾಡಲು ಸಮಸ್ಯೆಯಾಗಿದೆ. ಈ ರಸ್ತೆಯೂ ಹೊರನಾಡು ಮತ್ತು ಶೃಂಗೇರಿ ಮುಖ್ಯ ರಸ್ಯೆಯೂ ಹೌದು. ದಸರ ರಜೆಯೂ ಇರುವುದರಿಂದ ವಾಹನದಟ್ಟನೆ ಜಾಸ್ತಿ ಇದೆ. ರಸ್ತೆ ಕೆಸರುಮಯವಾಗಿದ್ದಕ್ಕೂ, ಕಿರಿದಾದ ಹೊಂಡ ಗುಂಡಿ ಇರುವ ರಸ್ತೆಯಾಗಿದ್ದಕ್ಕೂ ಪ್ರತಿದಿನ ಓಡಾಡುವ ಬಸ್ಸುಗಳು ಎದುರಿನಿಂದ ಬರುವ ವಾಹನಗಳಿಗೆ ಜಾಗಬಿಡಲು ರಸ್ತೆಯಿಂದ ಕೆಳಗೆ ಇಳಿಸಿದಾಗ ಬಸ್ಸುಗಳು ಕೆಸರಿಗೆ ಸಿಲುಕುತ್ತಿದ್ದಾವೆ.
ಹೀಗಾಗಿ ಇಂದು ಮಧ್ಯಾಹ್ನದ ನಂತರ ಬಸ್ಸುಗಳು ಬಸರೀಕಟ್ಟೆಯಿಂದ ಬಿಳಾಲುಕೊಪ್ಪ ಕೊಗ್ರೆ ಮೂಲಕ ಜಯಪುರಕ್ಕೆ ಹೋಗಬೇಕಿದ್ದ ಮಾರ್ಗವನ್ನು ಬದಲಾಯಿಸಿ
ಬಸರೀಕಟ್ಟೆಯಿಂದ ಹೇರೂರು ಮಾರ್ಗ ಮೂಲಕ ಜಯಪುರಕ್ಕೆ ತಲುಪುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು