6:33 PM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

15/10/2024, 19:39

ಶಶಿ ಬೆತ್ತದಕೊಳಲು ಜಯಪುರ

info.reporterkarnataka@gmaio.com

ಬಿಳಾಲುಕೊಪ್ಪದಿಂದ ಬಸರೀಕಟ್ಟೆ ಹೋಗುವ ರಸ್ತೆಯ ಅಕ್ಕಪಕ್ಕ ಮಣ್ಣುಹಾಕಿದ್ದು ಮಳೆಗೆ ರಸ್ತೆ ಕೆಸರುಮಯವಾಗಿ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ.


ಮೊದಲೇ ಹೊಂಡ ಗುಂಡಿಯಿಂದ ಕೂಡಿದ್ದ ಈ ಕಿರಿದಾದ ರಸ್ತೆಯಲ್ಲಿ ಓಡಾಡುವುದೇ ಸಮಸ್ಯೆಯಾಗಿತ್ತು. ಆದರೆ ಈಗ ರಸ್ತೆಯ ಎರಡು ಬದಿಯಲ್ಲೂ ಮಣ್ಣು ಹಾಕಲಾಗಿದೆ. ಎರಡ್ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸವಾರರಿಗೆ ಓಡಾಡಲು ಸಮಸ್ಯೆಯಾಗಿದೆ. ಈ ರಸ್ತೆಯೂ ಹೊರನಾಡು ಮತ್ತು ಶೃಂಗೇರಿ ಮುಖ್ಯ ರಸ್ಯೆಯೂ ಹೌದು. ದಸರ ರಜೆಯೂ ಇರುವುದರಿಂದ ವಾಹನದಟ್ಟನೆ ಜಾಸ್ತಿ ಇದೆ. ರಸ್ತೆ ಕೆಸರುಮಯವಾಗಿದ್ದಕ್ಕೂ, ಕಿರಿದಾದ ಹೊಂಡ ಗುಂಡಿ ಇರುವ ರಸ್ತೆಯಾಗಿದ್ದಕ್ಕೂ ಪ್ರತಿದಿನ ಓಡಾಡುವ ಬಸ್ಸುಗಳು ಎದುರಿನಿಂದ ಬರುವ ವಾಹನಗಳಿಗೆ ಜಾಗಬಿಡಲು ರಸ್ತೆಯಿಂದ ಕೆಳಗೆ ಇಳಿಸಿದಾಗ ಬಸ್ಸುಗಳು ಕೆಸರಿಗೆ ಸಿಲುಕುತ್ತಿದ್ದಾವೆ.
ಹೀಗಾಗಿ ಇಂದು ಮಧ್ಯಾಹ್ನದ ನಂತರ ಬಸ್ಸುಗಳು ಬಸರೀಕಟ್ಟೆಯಿಂದ ಬಿಳಾಲುಕೊಪ್ಪ ಕೊಗ್ರೆ ಮೂಲಕ ಜಯಪುರಕ್ಕೆ ಹೋಗಬೇಕಿದ್ದ ಮಾರ್ಗವನ್ನು ಬದಲಾಯಿಸಿ
ಬಸರೀಕಟ್ಟೆಯಿಂದ ಹೇರೂರು ಮಾರ್ಗ ಮೂಲಕ ಜಯಪುರಕ್ಕೆ ತಲುಪುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು