4:20 AM Friday12 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಬಿಲ್ಲವರು, ಮೊಗವೀರರು ಪಕ್ಷ ಬೇಧ ಮರೆತು ಒಂದಾಗಬೇಕು; ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬ ಬೇಕು: ಮೊಗವೀರ ರತ್ನ, ನಾಡೋಜ ಡಾ.ಜಿ.ಶಂಕರ್

19/10/2025, 13:35

ಮಂಗಳೂರು(reporterkarnataka.com): ಮಂಗಳೂರು ದಸರಾ ಗೌರವ ಸಮ್ಮಾನ್ 2025 ಪ್ರಶಸ್ತಿ ಸ್ವೀಕರಿಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿದ ಹಿಂದುಳಿದ ವರ್ಗಗಳ ನಾಯಕ ಮೊಗವೀರ ರತ್ನ ನಾಡೋಜ ಡಾ. ಜಿ. ಶಂಕರ್ ರವರು ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ವಂದಿಸಿ ಕ್ಷೇತ್ರದ ದೇವರ ದರ್ಶನ ಮಾಡಿದರು.

ಬಿಲ್ಲವರು ಮತ್ತು ಮೊಗವೀರ ಸಮಾಜ ರಾಜಕೀಯ ರಹಿತವಾಗಿ ಒಂದಾಗಬೇಕು. ಬಿಲ್ಲವ ಸಮಾಜ ಮತ್ತು ಮೊಗವೀರ ಸಮಾಜದ ನಡುವೆ ರಾಜಕೀಯ ಪ್ರಜ್ಞೆಯ ಕೊರತೆಯಿಂದ ಬಿಲ್ಲವ ಸಮಾಜದ ಅಭ್ಯರ್ಥಿಗಳು ಚುನಾವಣೆ ನಿಂತಾಗ ಮೊಗವೀರ ಸಮಾಜ ಸ್ಪಂದಿಸಲಿಲ್ಲ. ಅದೇ ರೀತಿ ಮೊಗವೀರ ಸಮಾಜ ಚುನಾವಣೆಗೆ ನಿಂತಾಗ ಬಿಲ್ಲವ ಸಮಾಜ ಸ್ಪಂದಿಸಲಿಲ್ಲ, ಇದರಿಂದಾಗಿ ಬಿಲ್ಲವ ಸಮಾಜಕ್ಕೆ ಮತ್ತು ಮೊಗವೀರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ಇಲ್ಲದೆ ಸಮಾಜದ ಅಭಿವೃದ್ಧಿಗೆ ತೊಂದರೆ ಆಗುತ್ತದೆ. ಮಂಗಳೂರು ಲೋಕಸಭಾ ಅಭ್ಯರ್ಥಿ ಉದಯೋನ್ಮುಖ ಪದ್ಮರಾಜ್ ಆರ್ ಪೂಜಾರಿ ಗೆಲ್ಲ ಬೇಕಿತ್ತು. ಬಿಲ್ಲವ ಸಮಾಜಕ್ಕೆ ಆದ ನಷ್ಟ. ಮುಂದಿನ ದಿನಗಳಲ್ಲಿ ಬಿಲ್ಲವ ಮತ್ತು ಮೊಗವೀರ ಸಮಾಜದ ವ್ಯಕ್ತಿಗಳು ಯಾವುದೇ ಪಕ್ಷದಲ್ಲಿ ನಿಂತರೂ ನಾವು ಪಕ್ಷ ಭೇಧ ಮರೆತು ಒಂದಾಗ ಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು