3:57 AM Tuesday1 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ಬಿಲ್ಲವರು, ಮೊಗವೀರರು ಪಕ್ಷ ಬೇಧ ಮರೆತು ಒಂದಾಗಬೇಕು; ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬ ಬೇಕು: ಮೊಗವೀರ ರತ್ನ, ನಾಡೋಜ ಡಾ.ಜಿ.ಶಂಕರ್

19/10/2025, 13:35

ಮಂಗಳೂರು(reporterkarnataka.com): ಮಂಗಳೂರು ದಸರಾ ಗೌರವ ಸಮ್ಮಾನ್ 2025 ಪ್ರಶಸ್ತಿ ಸ್ವೀಕರಿಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿದ ಹಿಂದುಳಿದ ವರ್ಗಗಳ ನಾಯಕ ಮೊಗವೀರ ರತ್ನ ನಾಡೋಜ ಡಾ. ಜಿ. ಶಂಕರ್ ರವರು ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ವಂದಿಸಿ ಕ್ಷೇತ್ರದ ದೇವರ ದರ್ಶನ ಮಾಡಿದರು.

ಬಿಲ್ಲವರು ಮತ್ತು ಮೊಗವೀರ ಸಮಾಜ ರಾಜಕೀಯ ರಹಿತವಾಗಿ ಒಂದಾಗಬೇಕು. ಬಿಲ್ಲವ ಸಮಾಜ ಮತ್ತು ಮೊಗವೀರ ಸಮಾಜದ ನಡುವೆ ರಾಜಕೀಯ ಪ್ರಜ್ಞೆಯ ಕೊರತೆಯಿಂದ ಬಿಲ್ಲವ ಸಮಾಜದ ಅಭ್ಯರ್ಥಿಗಳು ಚುನಾವಣೆ ನಿಂತಾಗ ಮೊಗವೀರ ಸಮಾಜ ಸ್ಪಂದಿಸಲಿಲ್ಲ. ಅದೇ ರೀತಿ ಮೊಗವೀರ ಸಮಾಜ ಚುನಾವಣೆಗೆ ನಿಂತಾಗ ಬಿಲ್ಲವ ಸಮಾಜ ಸ್ಪಂದಿಸಲಿಲ್ಲ, ಇದರಿಂದಾಗಿ ಬಿಲ್ಲವ ಸಮಾಜಕ್ಕೆ ಮತ್ತು ಮೊಗವೀರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ಇಲ್ಲದೆ ಸಮಾಜದ ಅಭಿವೃದ್ಧಿಗೆ ತೊಂದರೆ ಆಗುತ್ತದೆ. ಮಂಗಳೂರು ಲೋಕಸಭಾ ಅಭ್ಯರ್ಥಿ ಉದಯೋನ್ಮುಖ ಪದ್ಮರಾಜ್ ಆರ್ ಪೂಜಾರಿ ಗೆಲ್ಲ ಬೇಕಿತ್ತು. ಬಿಲ್ಲವ ಸಮಾಜಕ್ಕೆ ಆದ ನಷ್ಟ. ಮುಂದಿನ ದಿನಗಳಲ್ಲಿ ಬಿಲ್ಲವ ಮತ್ತು ಮೊಗವೀರ ಸಮಾಜದ ವ್ಯಕ್ತಿಗಳು ಯಾವುದೇ ಪಕ್ಷದಲ್ಲಿ ನಿಂತರೂ ನಾವು ಪಕ್ಷ ಭೇಧ ಮರೆತು ಒಂದಾಗ ಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು