8:29 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕತಾರ್ ನ “ತುಳು ಜಾತ್ರೆ” ಯಲ್ಲಿ ಮಿಂಚಿದ ಬಿಲ್ಲವಾಸ್ ಕತಾರ್ ನ “ಅಮ್ಮನ ತಮ್ಮನ” ತಂಡ

20/02/2025, 21:33

ದೋಹಾ(reporterkarnataka.com): ‘ತುಳು ಕೂಟ ಕತಾರ್’ ಆಶ್ರಯದಲ್ಲಿ “ತುಳು ಜಾತ್ರೆ” “ಐಡಿಯಲ್ ಇಂಡಿಯನ್ ಸ್ಕೂಲ್”, ಕತಾರ್ ನ ರಂಗವೇದಿಕೆಯಲ್ಲಿ ಅದ್ದೂರಿಯಾಗಿ ನಡೆಯಿತು. ತುಳುವರ ಪಾರಂಪರಿಕ ಪರಿಕಲ್ಪನೆ “ತುಳು ಜಾತ್ರೆ” ಯ ಅಂಗವಾಗಿ ನೃತ್ಯ,ಯಕ್ಷಗಾನ, ಪ್ರತಿಭಾ ಪುರಸ್ಕಾರ, ಜಾನಪದ ಆಟಗಳು ಮತ್ತು ವಿವಿಧ ತುಳು ನಾಡಿನ ತಿನಿಸುಗಳ ಪ್ರದರ್ಶನಗೊಂಡಿತು. ಸಾವಿರಗಟ್ಟಲೆ ಜನರು ಭಾಗವಹಿಸಿ ತಮ್ಮ ಊರಿನ ಜಾತ್ರೆಯ ಆನಂದವನ್ನು ಕತಾರ್ ನ ಮಣ್ಣಿನಲ್ಲಿ ಅನುಭವಿಸಿದರು.
ಬಿಲ್ಲವಾಸ್ ಕತಾರ್ ನ ಅವಿಭಾಜ್ಯ ಅಂಗವಾದ “ಅಮ್ಮನ ತಮ್ಮನ” ತಂಡದವರು ವಿಶೇಷವಾದ ಆಕರ್ಷಣೆಯೊಂದಿಗೆ ಎಲ್ಲರಿಗಿಂತ ವಿಭಿನ್ನವಾಗಿ ತಮ್ಮ ತಿನಿಸಂಗಡಿಯನ್ನು ಅಲಂಕಾರ ಮಾಡಿದ್ದು ಹಾಗೂ ವಿಶೇಷವಾಗಿ ಮನೆಯಲ್ಲಿ ಸಿದ್ದಪಡಿಸಿದ ಅಡುಗೆ ಜನರ ಮನ ತಣಿಸುವುದರೊಂದಿಗೆ ಭಾರೀ ಮನ್ನಣೆಯನ್ನು ಪಡೆಯುವಲ್ಲಿ ಸಾರ್ಥಕವಾಯಿತು.
ತುಳು ಜಾತ್ರೆಯಲ್ಲಿ ಪ್ರತೀ ಭಾರಿ ವಿಭಿನ್ನ ರೀತಿಯಲ್ಲಿ ಕಂಗೊಳಿಸುವ “ಅಮ್ಮನ ತಮ್ಮನ” ತಂಡದ ಇದು ಮೂರನೆಯ ವರ್ಷದ ಪ್ರದರ್ಶನವಾಗಿದೆ ಎನ್ನುವುದು ಉಲ್ಲೇಖನೀಯ.
ಈ ಭಾರಿಯ ರುಚಿ ರುಚಿ ಅಡುಗೆ ಮತ್ತು ತಂಡದ ಸರ್ವಾಂಗೀಣ ಪ್ರದರ್ಶನಕ್ಕೆ ಮನ ಸೋತ ತುಳು ಕೂಟ ಕತಾರ್, “ಅಮ್ಮನ ತಮ್ಮನ” ತಂಡದವರನ್ನು ಅತ್ಯುತ್ತಮ ತಂಡವೆಂದು ಘೋಷಿಸಿ ಪ್ರಶಸ್ತಿಯನ್ನಿತ್ತು ಮನ್ನಿಸಿತು. “ಅಮ್ಮನ ತಮ್ಮನ” ತಂಡದವರ ಪರಿಶ್ರಮಕ್ಕೆ ಸಂದ ಸಮಯೋಚಿತ ಗೌರವವಿದು.

ಇತ್ತೀಚಿನ ಸುದ್ದಿ

ಜಾಹೀರಾತು