5:52 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕತಾರ್ ನ “ತುಳು ಜಾತ್ರೆ” ಯಲ್ಲಿ ಮಿಂಚಿದ ಬಿಲ್ಲವಾಸ್ ಕತಾರ್ ನ “ಅಮ್ಮನ ತಮ್ಮನ” ತಂಡ

20/02/2025, 21:33

ದೋಹಾ(reporterkarnataka.com): ‘ತುಳು ಕೂಟ ಕತಾರ್’ ಆಶ್ರಯದಲ್ಲಿ “ತುಳು ಜಾತ್ರೆ” “ಐಡಿಯಲ್ ಇಂಡಿಯನ್ ಸ್ಕೂಲ್”, ಕತಾರ್ ನ ರಂಗವೇದಿಕೆಯಲ್ಲಿ ಅದ್ದೂರಿಯಾಗಿ ನಡೆಯಿತು. ತುಳುವರ ಪಾರಂಪರಿಕ ಪರಿಕಲ್ಪನೆ “ತುಳು ಜಾತ್ರೆ” ಯ ಅಂಗವಾಗಿ ನೃತ್ಯ,ಯಕ್ಷಗಾನ, ಪ್ರತಿಭಾ ಪುರಸ್ಕಾರ, ಜಾನಪದ ಆಟಗಳು ಮತ್ತು ವಿವಿಧ ತುಳು ನಾಡಿನ ತಿನಿಸುಗಳ ಪ್ರದರ್ಶನಗೊಂಡಿತು. ಸಾವಿರಗಟ್ಟಲೆ ಜನರು ಭಾಗವಹಿಸಿ ತಮ್ಮ ಊರಿನ ಜಾತ್ರೆಯ ಆನಂದವನ್ನು ಕತಾರ್ ನ ಮಣ್ಣಿನಲ್ಲಿ ಅನುಭವಿಸಿದರು.
ಬಿಲ್ಲವಾಸ್ ಕತಾರ್ ನ ಅವಿಭಾಜ್ಯ ಅಂಗವಾದ “ಅಮ್ಮನ ತಮ್ಮನ” ತಂಡದವರು ವಿಶೇಷವಾದ ಆಕರ್ಷಣೆಯೊಂದಿಗೆ ಎಲ್ಲರಿಗಿಂತ ವಿಭಿನ್ನವಾಗಿ ತಮ್ಮ ತಿನಿಸಂಗಡಿಯನ್ನು ಅಲಂಕಾರ ಮಾಡಿದ್ದು ಹಾಗೂ ವಿಶೇಷವಾಗಿ ಮನೆಯಲ್ಲಿ ಸಿದ್ದಪಡಿಸಿದ ಅಡುಗೆ ಜನರ ಮನ ತಣಿಸುವುದರೊಂದಿಗೆ ಭಾರೀ ಮನ್ನಣೆಯನ್ನು ಪಡೆಯುವಲ್ಲಿ ಸಾರ್ಥಕವಾಯಿತು.
ತುಳು ಜಾತ್ರೆಯಲ್ಲಿ ಪ್ರತೀ ಭಾರಿ ವಿಭಿನ್ನ ರೀತಿಯಲ್ಲಿ ಕಂಗೊಳಿಸುವ “ಅಮ್ಮನ ತಮ್ಮನ” ತಂಡದ ಇದು ಮೂರನೆಯ ವರ್ಷದ ಪ್ರದರ್ಶನವಾಗಿದೆ ಎನ್ನುವುದು ಉಲ್ಲೇಖನೀಯ.
ಈ ಭಾರಿಯ ರುಚಿ ರುಚಿ ಅಡುಗೆ ಮತ್ತು ತಂಡದ ಸರ್ವಾಂಗೀಣ ಪ್ರದರ್ಶನಕ್ಕೆ ಮನ ಸೋತ ತುಳು ಕೂಟ ಕತಾರ್, “ಅಮ್ಮನ ತಮ್ಮನ” ತಂಡದವರನ್ನು ಅತ್ಯುತ್ತಮ ತಂಡವೆಂದು ಘೋಷಿಸಿ ಪ್ರಶಸ್ತಿಯನ್ನಿತ್ತು ಮನ್ನಿಸಿತು. “ಅಮ್ಮನ ತಮ್ಮನ” ತಂಡದವರ ಪರಿಶ್ರಮಕ್ಕೆ ಸಂದ ಸಮಯೋಚಿತ ಗೌರವವಿದು.

ಇತ್ತೀಚಿನ ಸುದ್ದಿ

ಜಾಹೀರಾತು