7:01 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೋಂದೆಲ್ : ಮಣ್ಣಿನಡಿ ಸಿಲುಕಿದ ಮಹಿಳೆ ಮತ್ತು ಮಗು ; ಮಹಿಳೆ ಗಂಭೀರ, ಮಗು ಪಾರು

11/12/2021, 22:36

ಬೋಂದೆಲ್ (Reporter Karnataka)
ಮಂಗಳೂರು ನಗರದ ಹೊರವಲಯದ ಬೊಂದೇಲ್ ಕೃಷ್ಣ ನಗರದಲ್ಲಿ ತಡೆಗೋಡೆ ಕುಸಿದು ಮಗು ಹಾಗೂ ಮಹಿಳೆ ಮಣ್ಣಿನಡಿಗೆ ಸಿಲುಕಿದ ಘಟನೆ ನಡೆದಿದೆ.

ಅಲ್ಲೆ ಇದ್ದ ಸ್ಥಳೀಯರು ಹಾಗೂ ಕಾರ್ಮಿಕರು ತಕ್ಷಣ ಕಾರ್ಯಾಚರಣೆ ನಡೆಸಿದ್ದರಿಂದ ಮಗು ಪ್ರಾಣಾಪಾಯದಿಂದ ಪಾರಾಗಿದೆ ಆದರೆ ಮಹಿಳೆಯ ಸ್ಥಿತಿ ಗಂಭೀರವಾಗಿದೆ.

ಕೃಷ್ಣನಗರದಲ್ಲಿ ಪಾಲಿಕೆಯಿಂದ ನಡೆಯುತ್ತಿದ್ದ ಜಲ ಸಿರಿ ಯೋಜನೆ ಕಾಮಗಾರಿ ವೇಳೆ ತಡೆಗೋಡೆ ಕುಸಿದು ಬಿದ್ದಿದೆ. ಪರಿಣಾಮ ಉತ್ತರ ಕನ್ನಡ ಮೂಲದ ಕಾರ್ಮಿಕ ಮಹಿಳೆ ಹಾಗೂ ಮಗು ಮಣ್ಣಿನಡಿ ಹೂತು ಹೋಗಿದ್ದರು.

ಜೆಸಿಬಿ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಮಣ್ಣಿನಡಿಯಿಂದ ಇಬ್ಬರನ್ನೂ ಮೇಲೆತ್ತಲಾಗಿದೆ. ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗು ಅಪಾಯದಿಂದ ಪಾರಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು