9:16 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಬಿಪೋರ್ ಜಾಯ್ ಚಂಡಮಾರುತ: ಗುಜರಾತಿನಲ್ಲಿ 10 ಸಾವಿರ ಮಂದಿ ಸ್ಥಳಾಂತರ; 67 ರೈಲು ಸಂಚಾರ ರದ್ದು

13/06/2023, 19:44

ಅಹಮ್ಮದಾಬಾದ್(reporterkarnataka.com): ಅರಬ್ಬೀ ಸಮುದ್ರದಲ್ಲಿ ಬಿಪೋರ್ ಜಾಯ್ ಚಂಡಮಾರುತ ಉಂಟಾಗಿರುವ ಪರಿಣಾಮ ಸೌರಾಷ್ಟ್ರ ಮತ್ತು ಕಚ್ ಪ್ರದೇಶದಲ್ಲಿ ಸುಮಾರು 10 ಸಾವಿರ ಜನರನ್ನು ತಾತ್ಕಾಲಿಕ ನೆಲೆಯಲ್ಲಿ ಸ್ಥಳಾಂತರಿಸಲಾಗಿದ್ದು, 67 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.

ಭಾರೀ ಮಳೆ ಮತ್ತು ಗಂಟೆಗೆ 150 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 2 ದಿನಗಳ ಕಾಲ ಗುಜರಾತ್ ನಿಂದ 67 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಕಚ್, ಜುನಾಗಢ್, ಪೋರಬಂದರ್ ಮತ್ತು ದ್ವಾರಕಾದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಚಂಡಮಾರುತದಿಂದ ಕಚ್ ಮತ್ತು ಕರಾಚಿ ನಡುವೆ ಭೂಕುಸಿತ ಉಂಟಾಗುವ ಸಾಧ್ಯತೆಗಳಿವೆ. ವಿಪತ್ತು ನಿರ್ವಹಣಾ ಪಡೆ ಹಾಗೂ ವಾಯುಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು