ಇತ್ತೀಚಿನ ಸುದ್ದಿ
ಬಿಪೋರ್ ಜಾಯ್ ಚಂಡಮಾರುತ: ಗುಜರಾತಿನಲ್ಲಿ 10 ಸಾವಿರ ಮಂದಿ ಸ್ಥಳಾಂತರ; 67 ರೈಲು ಸಂಚಾರ ರದ್ದು
13/06/2023, 19:44

ಅಹಮ್ಮದಾಬಾದ್(reporterkarnataka.com): ಅರಬ್ಬೀ ಸಮುದ್ರದಲ್ಲಿ ಬಿಪೋರ್ ಜಾಯ್ ಚಂಡಮಾರುತ ಉಂಟಾಗಿರುವ ಪರಿಣಾಮ ಸೌರಾಷ್ಟ್ರ ಮತ್ತು ಕಚ್ ಪ್ರದೇಶದಲ್ಲಿ ಸುಮಾರು 10 ಸಾವಿರ ಜನರನ್ನು ತಾತ್ಕಾಲಿಕ ನೆಲೆಯಲ್ಲಿ ಸ್ಥಳಾಂತರಿಸಲಾಗಿದ್ದು, 67 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.
ಭಾರೀ ಮಳೆ ಮತ್ತು ಗಂಟೆಗೆ 150 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 2 ದಿನಗಳ ಕಾಲ ಗುಜರಾತ್ ನಿಂದ 67 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಕಚ್, ಜುನಾಗಢ್, ಪೋರಬಂದರ್ ಮತ್ತು ದ್ವಾರಕಾದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಚಂಡಮಾರುತದಿಂದ ಕಚ್ ಮತ್ತು ಕರಾಚಿ ನಡುವೆ ಭೂಕುಸಿತ ಉಂಟಾಗುವ ಸಾಧ್ಯತೆಗಳಿವೆ. ವಿಪತ್ತು ನಿರ್ವಹಣಾ ಪಡೆ ಹಾಗೂ ವಾಯುಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ.